newsics.com/ನ್ಯೂಸಿಕ್ಸ್
ತಿರುವನಂತಪುರಂ: ಕೇರಳ ರಾಜಕಾರಣದಲ್ಲಿ ಇಂದು ಭಾರಿ ತಲ್ಲಣ ಮೂಡಿಸುವಂತಹ ಬಿಗ್ ಡೆವಲಪ್ಮೆಂಟ್ ಒಂದಾಗಿದೆ. ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದಾದ್ಯಂತ ಭಾರಿ ಬೇಟೆ ಆರಂಭಿಸಿದ್ದಾರೆ.
ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಪಿಣರಾಯಿ ವಿಜಯನ್ ಅವರ ನಿವಾಸಗಳು ಸೇರಿದಂತೆ ಒಟ್ಟು 10 ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ರಾಜ್ಯ ರಾಜಧಾನಿ ತಿರುವನಂತಪುರಂನ ಬೇಕರಿ ಜಂಕ್ಷನ್ ಬಳಿ ಇರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ಮನೆ ಹಾಗೂ ಕಣ್ಣೂರಿನಲ್ಲಿರುವ ಅವರ ಕುಟುಂಬದ ನಿವಾಸಗಳ ಮೇಲೆ ಇಡಿ ತಂಡಗಳು ತಪಾಸಣೆ ನಡೆಸುತ್ತಿವೆ. ಒಟ್ಟು 10 ಆವರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಈ ರೇಡ್ ಮುಂದುವರಿದಿದೆ. ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರ ಐಟಿ ಸಂಸ್ಥೆಯ ವ್ಯವಹಾರಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಖನಿಜ ಕಂಪನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ , ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಒಡೆತನದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ ಎಂಬ ಐಟಿ ಕಂಪನಿಗೆ 2017-18 ರಿಂದ 2019-20ರ ಅವಧಿಯಲ್ಲಿ ಬರೋಬ್ಬರಿ ₹1.72 ಕೋಟಿ ಕಾನೂನುಬಾಹಿರ ಹಣವನ್ನು ಪಾವತಿಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮಗನನ್ನ ಬಿಟ್ಟು ಸ್ವಂತ ಮಾವನನ್ನೇ ಮದುವೆಯಾದ ಸೊಸೆ! ಕೊನೆಯಲ್ಲಿ ಟ್ವಿಸ್ಟ್ ನೋಡಿ ಬೆಚ್ಚಿಬಿದ್ದ ಪೊಲೀಸರು!