newsics.com/ನ್ಯೂಸಿಕ್ಸ್
ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ನಾಟಕ ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಹೈಕಮಾಂಡ್ ಸೂಚನೆಯಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.
ಈಗಾಗಲೇ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಶುಕ್ರವಾರವೇ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಡಿಕೆಶಿ ಪ್ರಮಾಣವಚನಕ್ಕೂ ಮುನ್ನ, ನಾಳೆ ಬೆಳಗಿನ ಜಾವ ಸಚಿವರ ಬ್ರೇಕ್ ಫಾಸ್ಟ್ ಸಭೆ ನಡೆಯಲಿದೆ. ಈ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಸಲ್ಲಿಸುವ ನಿರೀಕ್ಷೆ ಇದೆ. ರಾಜೀನಾಮೆ ನೀಡಿದ ನಂತರ ಡಿಕೆ ಶಿವಕುಮಾರ್ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಈ ಭೇಟಿ ಬಳಿಕ ಸರ್ಕಾರದ ಮುಂದಿನ ರೂಪುರೇಷೆಯ ಬಗ್ಗೆ ಹೆಚ್ಚಿನ ಸ್ಪಷ್ಟತೆ ಬರಬಹುದೆಂದು ಅಂದಾಜಿಸಲಾಗಿದೆ.
ಡಿಕೆಶಿ, ಜಾರಕಿಹೊಳಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ಇಂದು ಮಹತ್ವದ ಚರ್ಚೆ ನಡೆಯಲಿದೆ. ಪಕ್ಷ ಮತ್ತು ಸರ್ಕಾರವನ್ನು ಮುಂದಿನ ದಿನಗಳಲ್ಲಿ ಹೇಗೆ ಮುನ್ನಡೆಸಬೇಕು, ಎಲ್ಲರನ್ನೂ ವಿಶ್ವಾಸಕ್ಕೆ ಹೇಗೆ ತೆಗೆದುಕೊಳ್ಳಬೇಕು ಎಂಬ ವಿಷಯದಲ್ಲಿ ಖರ್ಗೆ ಮಾರ್ಗದರ್ಶನ ನೀಡುವ ನಿರೀಕ್ಷೆ ಇದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವರ್ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ.!