newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪದ ರಾಜಕೀಯ ಬೆಳವಣಿಗೆಗಳು ಮತ್ತು ಹೈಡ್ರಾಮಾಗಳು ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಹಾಗೂ ತೀವ್ರ ಕುತೂಹಲ ಮೂಡಿಸಿದೆ.
ರಾತ್ರಿ 11.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯಪಾಲರು ಸಂಬಂಧಿಕರ ಅನಾರೋಗ್ಯದ ಕಾರಣ ನೀಡಿ ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇಂದೋರ್ಗೆ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಿಎಂ ರಾಜೀನಾಮೆ ಕುರಿತ ಚರ್ಚೆಗಳ ಮಧ್ಯೆಯೇ ರಾಜ್ಯಪಾಲರ ಈ ಪ್ರಯಾಣ ಹೊಸ ಕುತೂಹಲಕ್ಕೆ ಕಾರಣವಾಗಿದೆ.
ಇತ್ತ ವಿಧಾನಸೌಧದಲ್ಲಿ ಸಿಎಂ ಕಚೇರಿ ಕೋಣೆ ಸಂಖ್ಯೆ 323ರಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಂಭ್ರಮದಿಂದ ಆರಂಭಗೊಂಡಿದ್ದ ಕಚೇರಿ ಈಗ ಖಾಲಿಯಾಗುವ ಸ್ಥಿತಿಗೆ ತಲುಪಿದ್ದು, ಸಿಬ್ಬಂದಿ ಭಾವುಕರಾಗಿರುವ ದೃಶ್ಯ ಕಂಡುಬಂದಿದೆ. ಸಿಎಂ ಹೊರನಡೆಯುವ ಸಂದರ್ಭದಲ್ಲಿ ನೂರಾರು ಸಿಬ್ಬಂದಿ ಕಣ್ಣೀರಿಟ್ಟಿದ್ದು, “ಸಿದ್ದರಾಮಯ್ಯ ಸಾಹೇಬ್ರಿಗೆ ಜೈ” ಎಂಬ ಘೋಷಣೆಗಳು ಕೇಳಿಬಂದಿವೆ.
ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!