newsics.com/ನ್ಯೂಸಿಕ್ಸ್
ಬೆಂಗಳೂರು : ನಾಳೆ ಸಂಜೆ 4.00 ಗಂಟೆಗೆ ನಾಳೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯನ್ನು ಅಧಿಕೃತಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಈ ಸಭೆಯು ಮೇ 30, 2026 ರಂದು ಸಂಜೆ 4:00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ‘ಸಮ್ಮೇಳನ ಸಭಾಂಗಣ’ದಲ್ಲಿ (ಕೊಠಡಿ ಸಂಖ್ಯೆ 334) ನಡೆಯಲಿದೆ. ಈ ಸಭೆಯು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ನೂತನ ಸಿಎಂ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣ ವಚನ ಸ್ವೀಕಾರ!