newsics.com/ನ್ಯೂಸಿಕ್ಸ್
ತಮಿಳುನಾಡಿನ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ (85) ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್, ನಟ ಅಜಿತ್ ಅವರ ಚೆನ್ನೈನ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕವೂ ತಮ್ಮ ಹಳೇ ಗೆಳೆಯ ಹಾಗೂ ಚಿತ್ರರಂಗದ ಸಹೋದ್ಯೋಗಿ ಅಜಿತ್ ಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಸಿಎಂ ವಿಜಯ್ ಅವರು ಅಜಿತ್ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡು ದುಃಖವನ್ನು ಹಂಚಿಕೊಂಡಿದ್ದಾರೆ.
ವಿಜಯ್ ಅವರ ಜೊತೆಯಲ್ಲೇ ಆಗಮಿಸಿದ ತ್ರಿಶಾ ಕೂಡ ಅಜಿತ್ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಬಿಗಿ ಭದ್ರತೆಯ ನಡುವೆ ಇಬ್ಬರೂ ತಾರೆಯರು ಅಜಿತ್ ಮನೆಗೆ ಭೇಟಿ ನೀಡುತ್ತಿರುವ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿವೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅಜಿತ್ ತಾಯಿ ಮೋಹಿನಿ ಮಣಿ, ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಚೆನ್ನೈನ ಪಾಲವಾಕ್ಕಂನಲ್ಲಿರುವ ಅವರ ನಿವಾಸದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ವಿಜಯ್ ಮುಖ್ಯಮಂತ್ರಿಯಾದ ನಂತರ ಇವರಿಬ್ಬರು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಹಿಂದೆಯೇ ತ್ರಿಶಾ ಹಾಗೂ ವಿಜಯ್ಗೆ ಸಂಬಂಧವಿದೆ ಎಂದು ಆರೋಪಿಸಿ ವಿಜಯ್ ಪತ್ನಿ ಸಂಗೀತಾ ಅವರು ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ಅದಾದ ಬಳಿಕ ಮದುವೆ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿತ್ತು. ವಿಜಯ್ ಅವರ ಸಿಎಂ ಪ್ರಮಾಣ ವಚನಕ್ಕೆ ತ್ರಿಶಾ ಬಂದಿದ್ದರು. ಈಗ ಅವರು ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
https://x.com/JDALEXtweets/status/2060776290043777264?s=20
ನಾಳೆ ಡಿಕೆಶಿ- ಸಿದ್ದರಾಮಯ್ಯ ದಿಲ್ಲಿಗೆ ಬುಲಾವ್? ಬುಧವಾರ ಡಿಕೆಶಿ ಒಬ್ಬರೇ ಪ್ರಮಾಣವಚನ?