newsics.com/ನ್ಯೂಸಿಕ್ಸ್
ಇನ್ನು ಮುಂದೆ ಸರಕಾರಿ ಶಾಲೆ ಶಿಕ್ಷಕರು, ಸಿಬ್ಬಂದಿ ಯವರಿಗೆ ರಾಜ್ಯ ಶಿಕ್ಷಣ ಇಲಾಖೆ ಹೊಸ ಆಪ್ವೊಂದನ್ನು ರೂಪಿಸಿದೆ. ಈ ಮೂಲಕ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಲೊಕೇಶನ್, ಫೇಸ್ ಆಧರಿತ ಹಾಜರಾತಿ ವ್ಯವಸ್ಥೆ ಅಳವಡಿಸಿದೆ. ನಿರ್ದಿಷ್ಟ ಸಮಯ ಮೀರಿ ಶಾಲೆಗೆ ಹಾಜರಾದರೆ ಆ ದಿನ ಆಕಸ್ಮಿಕ ರಜೆಯೆಂದೇ ಪರಿಗಣಿಸಲು ನಿರ್ಧರಿಸಲಾಗಿದೆ. ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್ಮೆಂಟ್ ಸಿಸ್ಟಮ್ ಆಪನ್ನು ರೂಪಿಸಲಾಗಿದೆ.
ಶುಕ್ರವಾರದಿಂದಲೇ ರಾಜ್ಯಾದ್ಯಂತ ಈ ನಿಯಮ ಜಾರಿಗೊಂಡಿದೆ. ಇನ್ಮುಂದೆ ಸರ್ಕಾರಿ ಶಾಲೆ ಶಿಕ್ಷಕರು ನಿರ್ದಿಷ್ಟ ಅವಧಿಯೊಳಗೆ ಶಾಲೆಗೆ ಹಾಜರಾಗಿ ದಿನಕ್ಕೆರೆಡು ಬಾರಿ ಲೊಕೇಶನ್, ಫೇಸ್ ಆಧರಿತ ಹಾಜರಾತಿ ಹಾಕಬೇಕಾಗಿದೆ. ಸರ್ಕಾರದ ಈ ನಿಲುವನ್ನು ಪೋಷಕರು, ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಶಿಕ್ಷಕರ ವಲಯ ಸ್ವಾಗತಿಸಿದೆ. ಇನ್ನೊಂದು ತಿಂಗಳಲ್ಲಿ ವಿದ್ಯಾರ್ಥಿಗಳಿಗೂ ಎಐ ಆಧಾರಿತ ಹಾಜರಾತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರ ಪೈಕಿ ಕೆಲವರು ಶಾಲೆಗೆ ಹಾಜರಾಗದೆ ಹಾಜರಾತಿ ಪಡೆದುಕೊಂಡು ಸಂಬಳ ಮಾಡಿಕೊಳ್ಳುತ್ತಿದ್ದರು. ಕೆಲವರು ಮುಖ್ಯಗುರುಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಹಾಜರಾತಿ ಪಡೆದುಕೊಂಡರೆ, ಇನ್ನು ಕೆಲವರು ಸಂಘಟನೆ ಹೆಸರಿನಲ್ಲಿ ಓಡಾಡಿಕೊಂಡು ಶಾಲೆಗೆ ಗೈರಾಗುತ್ತಿದ್ದರು. ಶಾಲೆಗೆ ಗೈರಾಗುವುದನ್ನೇ ಕಾಯಕ ಮಾಡಿಕೊಂಡ ಅನೇಕ ಶಿಕ್ಷಕರು ಶಾಲೆಯ ಮುಖ ನೋಡುವುದೇ ಅಪರೂಪ ಎನ್ನುವಂತಾಗಿತ್ತು.
ಶಿಕ್ಷಕರ ಕಡ್ಡಾಯ ಹಾಜರಾತಿ ಸಂಬಂಧ ಕೈಗೊಂಡ ತಂತ್ರಜ್ಞಾನ ಆಧರಿತ ಹಾಜರಾತಿ ಬಗ್ಗೆ ನಿರ್ಲಕ್ಷಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ನಿಗದಿತ ಶಾಲಾ ಅವಧಿ ಮುಗಿಯುವ ಮುನ್ನವೇ ಚೆಕ್ಔಟ್ ಆದಲ್ಲಿ ಆರಂಭಿಕ ನಿರ್ಗಮನ ಎಂದು ಪರಿಗಣಿಸಿ, ಅದನ್ನು ಕರ್ತವ್ಯದ ಅವಗಣನೆ ಅಥವಾ ಕರ್ತವ್ಯ ಲೋಪ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಅರ್ಧ ದಿನದ ರಜೆ ಕಡಿತವಾಗಲಿದೆ.
ಶಾಲೆ ಆವರಣದ 100 ಮೀಟರ್ ಅಂತರದಲ್ಲಿ ಮಾತ್ರ ಹಾಜರಾತಿ ನೋಂದಣಿ ಜಿಪಿಎಸ್ ಸೌಲಭ್ಯ ಇರಲಿದೆ. ಶಿಕ್ಷಕರು ಎಲ್ಲಿಂದ ಹಾಜರಾತಿ ಹಾಕಿದ್ದಾರೆ ಎಂಬುದು ತಿಳಿಯಲಿದ್ದು, ಇನ್ಮುಂದೆ ಕೆಲ ಶಿಕ್ಷಕರು ತಡವಾಗಿ ಬಂದಲ್ಲಿ ಅಥವಾ ಮಧ್ಯಾಹ್ನದ ಸಮಯ ಮುಗಿಯುವ ಮುನ್ನವೇ ಬೇಗ ಹೋದಲ್ಲಿ ಗೈರು ಬೀಳಲಿದೆ.
CM Vijay -Trisha ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್ : ವಿಡಿಯೋ ನೋಡಿ