Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀರ್ ಗೆ ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?
ಕರ್ನಾಟಕ

ಜಮೀರ್ ಗೆ ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?

Share
2 Min Read
SHARE

newsics.com/ನ್ಯೂಸಿಕ್ಸ್

ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಪ್ರಕರಣ ಈಗ ಹೈಕಮಾಂಡ್ ಮಟ್ಟಕ್ಕೆ ತಲುಪುವ ಲಕ್ಷಣಗಳು ಕಾಣಿಸುತ್ತಿವೆ. ಈ ವಿವಾದದ ಬೆನ್ನಲ್ಲೇ ಜಮೀರ್ ಅಹಮದ್ ತೀವ್ರ ಆತಂಕಕ್ಕೆ ಒಳಗಾಗಿದ್ದು, ಬೆಂಗಳೂರಿನಲ್ಲಿ ಸಂಧಾನ ಮತ್ತು ತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ.

ವಿಶೇಷವೆಂದರೆ, ಜಮೀರ್ ಅವರ ದೆಹಲಿ ಪ್ರವಾಸಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬ್ರೇಕ್ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?

ಸೋಮವಾರ ಬೆಳಿಗ್ಗೆ ದೆಹಲಿಗೆ ಹೋಗುವ ಸಿದ್ಧತೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದರು. ಈ ವೇಳೆ ವೈರಲ್ ಆಗಿರುವ ಆಡಿಯೋ ಕುರಿತು ಜಮೀರ್ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಈ ಸಮಯದಲ್ಲಿ ಜಮೀರ್ ದೆಹಲಿಗೆ ಬರುವುದು ಸೂಕ್ತವಲ್ಲ ಎಂಬ ಕಿವಿಮಾತು ಹೇಳಿದ್ದಾರೆ. “ಈಗಾಗಲೇ ವಿವಾದ ಸೃಷ್ಟಿಯಾಗಿದೆ, ಈ ಹೊತ್ತಿನಲ್ಲಿ ನೀವು ದೆಹಲಿಗೆ ಬಂದರೆ ಅದು ನೆಗೆಟಿವ್ ಆಗಿ ಬಿಂಬಿತವಾಗಬಹುದು. ಸದ್ಯಕ್ಕೆ ಬೆಂಗಳೂರಿನಲ್ಲೇ ಉಳಿದುಕೊಳ್ಳಿ” ಎಂದು ಸಿಎಂ ಸೂಕ್ಷ್ಮವಾಗಿ ಸಲಹೆ ನೀಡಿದ್ದಾರೆ. ಸಿಎಂ ಸಲಹೆಯ ಬೆನ್ನಲ್ಲೇ ಜಮೀರ್ ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ಖಾಸಗಿ ಗೆಸ್ಟ್ ಹೌಸ್‌ನಲ್ಲಿ ರಹಸ್ಯ ಸಭೆ:

ದೆಹಲಿ ಪ್ರವಾಸ ರದ್ದಾದ ಬೆನ್ನಲ್ಲೇ ಜಮೀರ್ ಅಹಮದ್ ಆತಂಕದಿಂದ ಮುಸ್ಲಿಂ ನಾಯಕರ ಮೊರೆ ಹೋಗಿದ್ದಾರೆ. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಕಾಂಗ್ರೆಸ್ ನಾಯಕರೊಬ್ಬರಿಗೆ ಸೇರಿದ ಖಾಸಗಿ ಗೆಸ್ಟ್ ಹೌಸ್‌ನಲ್ಲಿ ಜಮೀರ್ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರು ಹಾಗೂ ಎಂಎಲ್ಸಿ ನಸೀರ್ ಅಹ್ಮದ್ ಖಾನ್ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ. ಆಡಿಯೋ ವಿವಾದದಿಂದ ಆಗಬಹುದಾದ ರಾಜಕೀಯ ಹಾನಿಯನ್ನು ತಡೆಯುವುದು ಹೇಗೆ ಮತ್ತು ಹೈಕಮಾಂಡ್ ಮುಂದೆ ಯಾವ ರೀತಿ ಸ್ಪಷ್ಟನೆ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ.

ಹೆಚ್ಚಿದ ಆತಂಕ:

ವೈರಲ್ ಆಡಿಯೋದಲ್ಲಿ ಕಾಂಗ್ರೆಸ್ ವಿರೋಧಿ ಮಾತುಗಳು ಕೇಳಿಬಂದಿರುವುದು ಜಮೀರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅದರಲ್ಲೂ ದಾವಣಗೆರೆಯ ಶಾಸಕ ಸಮರ್ಥ ಶಾಮನೂರು ಅವರು ಈ ಬಗ್ಗೆ ಹೈಕಮಾಂಡ್‌ಗೆ ದೂರು ನೀಡುವ ಎಚ್ಚರಿಕೆ ನೀಡಿರುವುದು ಜಮೀರ್ ಅವರ ನಿದ್ದೆಗೆಡಿಸಿದೆ. ಒಂದು ಕಡೆ ಇದು ‘ನಕಲಿ ಆಡಿಯೋ’ ಎಂದು ಜಮೀರ್ ವಾದಿಸುತ್ತಿದ್ದರೂ, ಪಕ್ಷದೊಳಗಿನ ಇತರ ನಾಯಕರು ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಐಪಿಎಲ್ ಫೈನಲ್‌ನಲ್ಲಿ ಅನುಷ್ಕಾ ಧರಿಸಿದ್ದ ಈ ಡ್ರೆಸ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!

TAGGED:What was that 'subtle' message Siddaramaiah gave to Jameer?
Share This Article
Facebook Twitter Copy Link Print
Previous Article ಐಪಿಎಲ್ ಫೈನಲ್‌ನಲ್ಲಿ ಅನುಷ್ಕಾ ಧರಿಸಿದ್ದ ಈ ಡ್ರೆಸ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!
Next Article ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?