ಬೆಂಗಳೂರು: ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಆದೇಶಿಸಿದೆ
ಜೂನ್ 21ರಿಂದ ಜುಲೈ 10ರವರೆಗೆ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. 2026ರ ಮೇ ಮೊದಲು ಪೊಲೀಸ್ ಇಲಾಖೆಯ ಸಂಚಾರ ಇ- ಚಲನ್ ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತು ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲಾ ಸಂಚಾರ ಪೊಲೀಸ್ ಠಾಣೆಗಳು, ಬೆಂಗಳೂರು ನಗರ ಸಂಚಾರ ನಿರ್ವಹಣಾ ಕೇಂದ್ರಗಳಲ್ಲಿ ದಂಡ ಪಾವತಿಸಬಹುದು. ಆನ್ಲೈನ್ ಮೂಲಕವೂ ಸಹ ಹಳೆ ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಇದೆ. ಕರ್ನಾಟಕ ಒನ್, ಕೆ.ಎಸ್.ಪಿ.ಎಸ್. ಆ್ಯಪ್ ಮೂಲಕ ಕೂಡ ದಂಡ ಪಾವತಿಸಬಹುದಾಗಿದೆ ಎಂದು ಹೇಳಲಾಗಿದೆ.