newsics.com/ನ್ಯೂಸಿಕ್ಸ್
ಸೂರತ್ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ.
ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ. ಜಾಗತಿಕವಾಗಿ ಪೆಟ್ರೋಲ್-ಗ್ಯಾಸ್ ಬೆಲೆಗಳು ಏರಿಳಿತ ಕಾಣುತ್ತಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದಿಂದಾಗಿ ಭಾರತವು ಪ್ರತಿಯೊಂದು ಬಿಕ್ಕಟ್ಟನ್ನು ಧೈರ್ಯದಿಂದ ಎದುರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಅವರು ತಿಳಿಸಿದರು.