newsics.com/ನ್ಯೂಸಿಕ್ಸ್
ತಮಿಳುನಾಡು ಬಿಜೆಪಿಗೆ ಏಟಿನ ಮೇಲೆ ಏಟು ಬೀಳುತ್ತಲೇ ಇದೆ. ಅಣ್ಣಾಮಲೈ, ಉಪಾಧ್ಯಕ್ಷ ಕರು ನಾಗರಾಜನ್ ರಾಜೀನಾಮೆ ಬೆನ್ನಲ್ಲೇ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಸುಮತಿ ವೆಂಕಟೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುಮತಿ ಎಕ್ಸ್ ಫೋಸ್ಟ್ನಲ್ಲಿ ಏನಿದೆ?
ಎಕ್ಸ್ನಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಕಾರ್ಯದರ್ಶಿ ಸುಮತಿ ವೆಂಕಟೇಶ್ ಭಾರವಾದ ಹೃದಯದಿಂದ ನಾನು ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿಯಲು ಮತ್ತು ಪಕ್ಷದೊಂದಿಗಿನ ನನ್ನ ಸಂಬಂಧವನ್ನು ಕೊನೆಗೊಳಿಸಲು ನಿರ್ಧರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಮೋದಿಯವರ ಕಾರ್ಯ ಸದಾ ಪ್ರೇರಣೆ
ಪ್ರಧಾನಿ ಮೋದಿಯವರ ನಾಯಕತ್ವ, ಕಾರ್ಯವೈಖರಿ, ಬಿಜೆಪಿ ಪ್ರತಿಪಾದಿಸುವ ರಾಷ್ಟ್ರೀಯತೆ, ದೇಶಭಕ್ತಿ, ಸೇವೆಯಂತಹ ಆದರ್ಶದಿಂದ ನಾನು ಸದಾ ಪ್ರೇರಿತಳು. ಇವು ನನ್ನ ಪಯಣದುದ್ದಕ್ಕೂ ನನಗೆ ಮಾರ್ಗದರ್ಶನ ಕೊಟ್ಟಿವೆ. ಮುಂದೆಯೂ ನೀಡಲಿವೆ. ರಾಜೀನಾಮೆ ನೀಡುವ ನಿರ್ಧಾರವನ್ನು ಬಹಳ ಜಾಗರೂಕವಾಗಿ ಚಿಂತಿಸಿ ತೆಗೆದುಕೊಂಡಿದ್ದೇನೆ. ಅಧಿಕಾರಾವಧಿಯಲ್ಲಿ ಮಾರ್ಗದರ್ಶನ, ಬೆಂಬಲ ಮತ್ತು ಪ್ರೋತ್ಸಾಹ ನೀಡಿದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಎಲ್ಲಾ ಪಕ್ಷದ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ನಾನು ಪ್ರಾಮಾಣಿಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ
Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!