newsics.com/ನ್ಯೂಸಿಕ್ಸ್
ಬೆಂಗಳೂರು : ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಮನವೊಲಿಕೆ ಕಸರತ್ತು ತೀವ್ರಗೊಂಡಿದೆ.
ನಿನ್ನೆ ದಿಢೀರನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರ ನಡೆ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳವಣಿಗೆಗಳು ವೇಗವಾಗಿ ಬದಲಾಗುತ್ತಿದ್ದು, ಅಸಮಾಧಾನಿತ ನಾಯಕನನ್ನು ಸಮಾಧಾನಪಡಿಸಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಹಿರಿಯ ನಾಯಕರಾಗಿರುವ ರೆಡ್ಡಿ ಅವರ ರಾಜೀನಾಮೆಯಿಂದ ಪಕ್ಷಕ್ಕಾಗುವ ಮುಜುಗರ ಹಾಗೂ ಹಾನಿಯನ್ನು ತಪ್ಪಿಸಲು ಸುರ್ಜೆವಾಲಾ ಹರಸಾಹಸ ಪಟ್ಟಿದ್ದಾರೆ. ರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾದ ಅಂಶಗಳನ್ನು ಆಲಿಸಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್ಲೈನ್ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ!