Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ₹6,000 ಸಂಬಳಕ್ಕೆ ಸೇರಿದ ಸರ್ಕಾರಿ ಇಂಜಿನಿಯರ್‌ ಆಸ್ತಿ ಮೌಲ್ಯ ಕಂಡು ದಂಗಾದ ಅಧಿಕಾರಿಗಳು
ದೇಶಪ್ರಮುಖ

₹6,000 ಸಂಬಳಕ್ಕೆ ಸೇರಿದ ಸರ್ಕಾರಿ ಇಂಜಿನಿಯರ್‌ ಆಸ್ತಿ ಮೌಲ್ಯ ಕಂಡು ದಂಗಾದ ಅಧಿಕಾರಿಗಳು

Share
2 Min Read
SHARE

newsics.com/ನ್ಯೂಸಿಕ್ಸ್

ಭುವನೇಶ್ವರ: ದೇಶಾದ್ಯಂತ ಸರ್ಕಾರಿ ವಲಯದಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿ ಆಡಳಿತವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಒಡಿಶಾ ರಾಜ್ಯ ವಿಜಿಲೆನ್ಸ್​ ಇಲಾಖೆಯು ಕಾರ್ಯಾಚರಣೆಯೊಂದನ್ನು ನಡೆಸಿದೆ.

 

ಒಡಿಶಾದ ಕಾಂಧಮಾಲ್ ಜಿಲ್ಲೆಯ ಬಾಲಿಗುಡದ ಐಟಿಡಿಎ  ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವೈಕುಂಠ ನಾಥ್ ಬೆಹೆರಾ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ಏಕಕಾಲಕ್ಕೆ ಭರ್ಜರಿ ದಾಳಿ ನಡೆಸಿದ್ದಾರೆ.ಜೂನ್ 6, 2026 ರಂದು ಭುವನೇಶ್ವರದ ವಿಶೇಷ ವಿಜಿಲೆನ್ಸ್ ನ್ಯಾಯಾಲಯದ ಶೋಧ ವಾರಂಟ್ ಮೇರೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಐದು ಡಿಎಸ್‌ಪಿಗಳು ಮತ್ತು ಆರು ಇನ್ಸ್‌ಪೆಕ್ಟರ್‌ಗಳನ್ನೊಳಗೊಂಡ ದಕ್ಷ ಅಧಿಕಾರಿಗಳ ತಂಡವು ಈ ಆಪರೇಷನ್ ಅನ್ನು ಅತ್ಯಂತ ವ್ಯವಸ್ಥಿತವಾಗಿ ಪೂರ್ಣಗೊಳಿಸಿದೆ.

ವಿಜಿಲೆನ್ಸ್ ಅಧಿಕಾರಿಗಳು ಬೆಹೆರಾ ಮತ್ತು ಅವರ ಪತ್ನಿಯ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್‌ಗಳನ್ನು ಪರಿಶೀಲಿಸಿದಾಗ ಬರೋಬ್ಬರಿ ₹2 ಕೋಟಿಗೂ ಅಧಿಕ ನಗದು ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ.ಇದಲ್ಲದೆ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ₹2.66 ಲಕ್ಷ ನಗದು ಸಿಕ್ಕಿದೆ. ನಗದು ಎಣಿಕೆಗಾಗಿ ಬ್ಯಾಂಕ್ ಯಂತ್ರಗಳನ್ನು ಬಳಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಇಂಜಿನಿಯರ್ ಮತ್ತು ಆತನ ಕುಟುಂಬಸ್ಥರ ಹೆಸರಿನಲ್ಲಿ ಐಷಾರಾಮಿ ಆಸ್ತಿಗಳು ಪತ್ತೆಯಾಗಿವೆ:

ಭುವನೇಶ್ವರದ ನೀಲಾದ್ರಿ ವಿಹಾರದಲ್ಲಿ 10,500 ಚದರ ಅಡಿಯ 4 ಅಂತಸ್ತಿನ ಬೃಹತ್ ಕಟ್ಟಡ.

ಭುವನೇಶ್ವರ ಮತ್ತು ಜಾಜ್‌ಪುರದಲ್ಲಿ ಇನ್ನುಳಿದ 4 ಬಹುಮಹಡಿ ವಸತಿ ಕಟ್ಟಡಗಳು.

ಭುವನೇಶ್ವರದ ಪ್ರೈಮ್ ಲೊಕೇಶನ್‌ಗಳಲ್ಲಿ 8 ಸೈಟುಗಳು, ಜಾಜ್‌ಪುರದಲ್ಲಿ 5 ಮತ್ತು ಬರಿಪಾದದಲ್ಲಿ 1 ಸೇರಿದಂತೆ ಒಟ್ಟು 14 ದುಬಾರಿ ನಿವೇಶನಗಳು (Plots).

341 ಗ್ರಾಂ ಚಿನ್ನಾಭರಣ ಹಾಗೂ ₹45 ಲಕ್ಷಕ್ಕೂ ಅಧಿಕ ಮೊತ್ತದ ಬ್ಯಾಂಕ್ ಠೇವಣಿಗಳನ್ನು ತನಿಖಾ ತಂಡ ಪತ್ತೆ ಮಾಡಿದೆ.

1999 ರಲ್ಲಿ ಕೇವಲ 6,000 ರೂ. ಮಾಸಿಕ ವೇತನಕ್ಕೆ ಜೂನಿಯರ್ ಎಂಜಿನಿಯರ್ ಆಗಿ ಸೇವೆಗೆ ಸೇರಿ, ಇತ್ತೀಚೆಗೆ 2026 ರ ಫೆಬ್ರವರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಬಡ್ತಿ ಪಡೆದಿದ್ದ ವೈಕುಂಠ ನಾಥ್ ಬೆಹೆರಾ ಅವರ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಯ ಇಡೀ ಜಾಲವನ್ನು ತಾಂತ್ರಿಕ ವಿಭಾಗದ ನೆರವಿನೊಂದಿಗೆ ನಿಖರವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ.

ಸದ್ಯ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ  ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು, ತಾಂತ್ರಿಕ ತಜ್ಞರ ನೆರವಿನೊಂದಿಗೆ ಆಸ್ತಿಗಳ ನಿಜವಾದ ಮಾರುಕಟ್ಟೆ ಮೌಲ್ಯದ ಮೌಲ್ಯಮಾಪನ ಮಾಡುತ್ತಿದ್ದಾರೆ. ಇಂಜಿನಿಯರ್‌ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

TAGGED:000 salaryGovernment engineer gets ₹6officials find out property valueriots
Share This Article
Facebook Twitter Copy Link Print
Previous Article ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ
Next Article ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋ ನೋಡಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?