newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯಸಭಾ ಮತ್ತು ವಿಧಾನ ಪರಿಷತ್ಗೆ ಬಿಜೆಪಿ ಅಭ್ಯರ್ಥಿಗಳನ್ನ ಘೋಷಿಸಿದೆ. ರಾಜ್ಯಸಭೆಗೆ ಡಾ. ಎಂ.ನಾಗರಾಜ್ ಹಾಗೂ ವಿಧಾನ ಪರಿಷತ್ಗೆ ಲಿಂಗರಾಜ್ ಪಾಟೀಲ್ ಮತ್ತು ರಾಘು ಕೌಟಿಲ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಮೈಸೂರಿನರಾಗಿದ್ದಾರೆ. ಇತ್ತ, ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಮೈತ್ರಿಕೂಟವು 3ನೇ ಅಭ್ಯರ್ಥಿಯಾಗಿ ಗೋವಿಂದ ರಾಜು ಹೆಸರನ್ನು ಘೋಷಿಸಲಾಗಿದೆ.
ಅತ್ಯಂತ ಗಮನ ಸೆಳೆದ ಬೆಳವಣಿಗೆಯೆಂದರೆ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆ ಅಂತಿಮವಾಗಿ ಸಾಕಾರವಾಗಿಲ್ಲ. ಅದೇ ರೀತಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಈ ಬಾರಿ ಟಿಕೆಟ್ ದೊರಕಿಲ್ಲ.
ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಬಿಜೆಪಿ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿದೆ. ಲಿಂಗರಾಜ್ ಪಾಟೀಲ್ ಅವರು ಪಕ್ಷದ ಶಿಸ್ತು ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದರೆ, ರಘು ಕೌಟಿಲ್ಯ ರಾಜ್ಯ ಒಬಿಸಿ ಮೋರ್ಚಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೋಟಿ ಕೋಟಿ ವ್ಯವಹಾರಕ್ಕೆ ಕೈಹಾಕಿದ್ದ ನೀಲಣ್ಣವರ್ಗೆ ಈಗ ಅದೇ ದುಡ್ಡು ಕಂಟಕ!