newsics.com/ನ್ಯೂಸಿಕ್ಸ್
ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮೂರು ಏರ್ ಇಂಡಿಯಾ ವಿಮಾನಗಳು ಹಾನಿಯಾಗಿವೆ.
ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ರನ್ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಜಖಂಗೊಂಡಿರುವ ಮೂರೂ J320 (ವಿಮಾನ ಸಂಖ್ಯೆ) ಮಾದರಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸದ್ಯ ವಿಮಾನಗಳ ರಿಪೇರಿ ಕೆಲಸ ನಡೆಯುತ್ತಿದೆ. ಇವುಗಳಲ್ಲಿ ಎರಡು ವಿಮಾನಗಳು ಕೆಲವೇ ದಿನಗಳಲ್ಲಿ ಪುನಃ ಹಾರಾಟಕ್ಕೆ ಸಿದ್ಧವಾಗಲಿವೆ.
ಎಲನ್ ಮಸ್ಕ್ ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?