newsics.com/ನ್ಯೂಸಿಕ್ಸ್
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸರ್ಕಾರವು ಹಲವು ದಿನಗಳಿಂದ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ನೀಡುತ್ತಾ ಬಂದಿದೆ. ಇದೀಗ ಈ ಯೋಜನೆಯಲ್ಲಿ ಸರ್ಕಾರ ಕಡಿತ ಮಾಡಿದೆ.
ಇನ್ನು ಮುಂದೆ ವರ್ಷಕ್ಕೆ ಕೇವಲ ನಾಲ್ಕು ಸಿಲಿಂಡರ್ಗಳಿಗೆ ಮಾತ್ರ ಸಬ್ಸಿಡಿ ದೊರೆಯಲಿದೆ. ಆ ನಂತರ ಬುಕ್ ಮಾಡುವ ಸಿಲಿಂಡರ್ಗಳಿಗೆ ಯಾವುದೇ ರಿಯಾಯಿತಿ ಇರುವುದಿಲ್ಲ. ಈ ಹಿಂದೆ ವರ್ಷಕ್ಕೆ ಒಂಬತ್ತು ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು, ಅದನ್ನು ಇದೀಗ ನಾಲ್ಕಕ್ಕೆ ಇಳಿಸಲಾಗಿದೆ.
ಹೆಚ್ಚುತ್ತಿರುವ ವೆಚ್ಚಗಳು ಮತ್ತು ಇಂಧನ ಸಬ್ಸಿಡಿಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಸುಮಾರು 10.5 ಕೋಟಿ ಬಡ ಕುಟುಂಬಗಳು ಈ ಯೋಜನೆಯ ಮೂಲಕ ಗ್ಯಾಸ್ ಸಬ್ಸಿಡಿ ಪಡೆಯುತ್ತಿವೆ.
ಬಡವರಿಗೆ ಸಂಕಷ್ಟ ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡುವ ಸಿಲಿಂಡರ್ಗಳ ಸಂಖ್ಯೆಯನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸಲಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ. ಭಾನುವಾರ 14.2 ಕೆಜಿ ಸಿಲಿಂಡರ್ ಬೆಲೆಯನ್ನು 29 ರೂಪಾಯಿ ಹೆಚ್ಚಿಸಿದ ಬೆನ್ನಲ್ಲೇ, ಮರುದಿನವೇ ಸಬ್ಸಿಡಿಯಲ್ಲಿ ಕಡಿತಗೊಳಿಸಿ ಮತ್ತೊಂದು ಆದೇಶ ಹೊರಡಿಸಿದೆ.
ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್ಗಳು ಸಿಕ್ಕಿಬಿದ್ದಿದ್ದು ಹೇಗೆ?