Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ನಟ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?
ಕರ್ನಾಟಕದೇಶಪ್ರಮುಖ

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ನಟ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

Share
4 Min Read
SHARE

newsics.com /ನ್ಯೂಸಿಕ್ಸ್

ಬೆಂಗಳೂರು: ಧರ್ಮಸ್ಥಳ ಗ್ರಾಮದ ಬಹುಚರ್ಚಿತ ‘ಬುರುಡೆ ಪ್ರಕರಣ’ದ ತನಿಖೆಗೆ ಸಂಬಂಧಿಸಿದಂತೆ ಈಗ ಅತ್ಯಂತ ಮಹತ್ವದ ಹಾಗೂ ಸ್ಫೋಟಕ ತಿರುವು ಸಿಕ್ಕಿದೆ.

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಕುಂದು ತರಲು ಬರೋಬ್ಬರಿ 200 ಕೋಟಿ ರೂಪಾಯಿಗಳ ಬಜೆಟ್ ಇಟ್ಟುಕೊಂಡು ಬೃಹತ್ ಷಡ್ಯಂತ್ರ ರೂಪಿಸಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಈ ಇಡೀ ಸಂಚಿನ ಕುರಿತು ಸಮಗ್ರ ತನಿಖಾ ವರದಿ ಸಲ್ಲಿಕೆಗೆ ಕೋರಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನ ಸಿ.ಎನ್. (ಚಿನ್ನಯ್ಯ) ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ.

ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರ ಮೂಲಕ ಸಲ್ಲಿಕೆಯಾಗಿರುವ ಈ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರು, ರಾಜ್ಯ ಸರ್ಕಾರ ಹಾಗೂ ವಿಶೇಷ ತನಿಖಾ ತಂಡಕ್ಕೆ (SIT) ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ, ತನಿಖೆಯ ಸದ್ಯದ ಸ್ಥಿತಿಗತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಎಸ್‌ಐಟಿಗೆ ಸೂಚಿಸಿ, ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿದ್ದಾರೆ.

ತಮ್ಮ ಅರ್ಜಿಯಲ್ಲಿ ಇಡೀ ಜಾಲವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿರುವ ಚಿನ್ನಯ್ಯ, ಎಸ್‌ಐಟಿ (SIT) ತನಿಖೆಯ ಕರ್ತವ್ಯಲೋಪವನ್ನು ಗಂಭೀರವಾಗಿ ಪ್ರಶ್ನಿಸಿದ್ದಾರೆ. ನನ್ನ ಪಾಡಿಗೆ ನಾನಿದ್ದೆ, ಇವರೇ ನನ್ನನ್ನು ಒತ್ತಾಯಪೂರ್ವಕವಾಗಿ ಕರೆತಂದು ಇದರಲ್ಲಿ ಸಿಲುಕಿಸಿದ್ದಾರೆ. ಇಷ್ಟೆಲ್ಲಾ ದೊಡ್ಡ ಮಟ್ಟದ ಪ್ರಭಾವಿಗಳು ಸೇರಿ ಷಡ್ಯಂತ್ರ ಹೆಣೆದಿದ್ದರೂ, ಜೈಲಿಗೆ ಹೋಗಿದ್ದು ಪರಿಶಿಷ್ಟ ಜಾತಿಗೆ ಸೇರಿದ ನಾನೊಬ್ಬನೇ. ಅಸಲಿ ಸೂತ್ರಧಾರರು ಈಗಲೂ ಆರಾಮಾಗಿದ್ದಾರೆ ಎಂದು ಚಿನ್ನಯ್ಯ ತನ್ನ ಅರ್ಜಿಯಲ್ಲಿ ಉಲಲೇಖಿಸಿದ್ದಾನೆ

ಎಸ್‌ಐಟಿ ವಿಳಂಬ ನೀತಿ

ಎಫ್‌ಐಆರ್ ಸಂಖ್ಯೆ 39/2025 ರ ತನಿಖೆ ಆರಂಭವಾಗಿ ಇಷ್ಟು ದಿನಗಳಾದರೂ ಎಸ್‌ಐಟಿ ಅಂತಿಮ ವರದಿ ಸಲ್ಲಿಸದೆ ವಿಳಂಬ ಮಾಡುತ್ತಿದೆ. ಪ್ರಾಥಮಿಕ ವರದಿಯಲ್ಲಿ ಅಸಲಿ ಆರೋಪಿಗಳ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದರೂ, ಅವರ ವಿರುದ್ಧ ಎಸ್‌ಐಟಿ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾನೆ.

ಈ ಷಡ್ಯಂತ್ರದ ಹಿಂದೆ ಅಂತರರಾಜ್ಯ ಮಟ್ಟದ ಆರ್ಥಿಕ ವಹಿವಾಟು ನಡೆದಿರುವ ಬಗ್ಗೆ ಚಿನ್ನಯ್ಯ ಕೋರ್ಟ್‌ಗೆ ಮಾಹಿತಿ ನೀಡಿದ್ದಾನೆ. ಧರ್ಮಸ್ಥಳದ ವಿರುದ್ಧ ಸುಳ್ಳು ಹಬ್ಬಿಸಲು ಒಟ್ಟು 200 ಕೋಟಿ ರೂಪಾಯಿಗಳ ಬಜೆಟ್ ಸಿದ್ಧವಾಗಿತ್ತು. ಈ ಸಂಚಿನ ಭಾಗವಾಗಿ ನನಗೆ 50 ಲಕ್ಷ ರೂಪಾಯಿ ಕೊಡುವ ಆಮಿಷವನ್ನು ಮಹೇಶ್ ಶೆಟ್ಟಿ ತಿಮರೋಡಿ ಒಡ್ಡಿದ್ದ. ಈ ಷಡ್ಯಂತ್ರಕ್ಕಾಗಿ ಕೇರಳದಿಂದ ಹಣ ಸಂದಾಯವಾಗಿದೆ. ಇದರೊಂದಿಗೆ ಚಿತ್ರದುರ್ಗದ ರಮಾ ನಾಗರಾಜ್ ಎಂಬುವರೂ ಕೂಡ ಹಣ ನೀಡಿದ್ದಾರೆ. ತಮ್ಮ ಪತ್ನಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವ ಹಾಗೂ ನಗದು ಹಣದ ವಹಿವಾಟಿನ ಸಂಪೂರ್ಣ ವಿವರಗಳನ್ನು ಚಿನ್ನಯ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದಾನೆ.

ನಟ ಪ್ರಕಾಶ್ ರಾಜ್ ಹೆಸರು ಪ್ರಸ್ತಾಪ

ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಪ್ರಭಾವಿ ವ್ಯಕ್ತಿಗಳು ಹಾಗೂ ಯೂಟ್ಯೂಬರ್‌ಗಳ ಹೆಸರುಗಳು ಉಲ್ಲೇಖವಾಗಿರುವುದು ತೀವ್ರ ಸಂಚಲನ ಮೂಡಿಸಿದೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ನೀನು ಹೇಳಿಕೆ ಕೊಡು, 29ನೇ ತಾರೀಕು ಬಂದು ನಿನ್ನನ್ನು ಅಪ್ಪಿಕೊಳ್ಳುತ್ತೇನೆ ಎಂದು ನಟ ಪ್ರಕಾಶ್ ರಾಜ್ ಅವರು ತಮಿಳಿನಲ್ಲಿ ತಮಗೆ ಹೇಳಿದ್ದರು ಎಂಬುದಾಗಿ ಚಿನ್ನಯ್ಯ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.

ಜತೆಗೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ವಿಠಲಗೌಡ, ಮತ್ತು ಜಯಂತ್ ಈ ಇಡೀ ಷಡ್ಯಂತ್ರದ ಮುಖ್ಯ ರೂವಾರಿಗಳು ಎಂದು ಹೆಸರಿಸಲಾಗಿದೆ. ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ ಹಾಗೂ ಅಜಯ್ ಅಂಚನ್ ಎಂಬುವರು ತಮ್ಮ ಸ್ವಾರ್ಥಕ್ಕೆ ಬೇಕಾದ ರೀತಿಯಲ್ಲಿ 30 ರಿಂದ 35 ವೀಡಿಯೋಗಳನ್ನು ಮೊದಲೇ ಮಾಡಿಕೊಂಡಿದ್ದರು. ಅವರು ತೋರಿಸಿದ ಸ್ಥಳಗಳನ್ನೇ ನಾನು ನಂತರ ಎಸ್‌ಐಟಿ ಅಧಿಕಾರಿಗಳಿಗೆ ತೋರಿಸಬೇಕಾಯಿತು ಎಂದು ಚಿನ್ನಯ್ಯ ದೂರಿದ್ದಾರೆ.

ಒತ್ತೆಯಾಳಾಗಿಟ್ಟಿದ್ದ ಗ್ಯಾಂಗ್!

ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಹೇಳಲು ನನ್ನ ಆತ್ಮಸಾಕ್ಷಿ ಒಪ್ಪಲಿಲ್ಲ. ಆಗ ಮಹೇಶ್ ಶೆಟ್ಟಿ ತಿಮರೋಡಿ ಚಾಕುವಿನಿಂದ ನನ್ನನ್ನು ಕೊಲ್ಲಲು ಬಂದಿದ್ದ. ಹೇಳಿಕೊಟ್ಟಂತೆ ಕೇಳದಿದ್ದರೆ ನಿನ್ನ ಹೆಂಡತಿಯನ್ನು ಕೊಲ್ಲುತ್ತೇವೆ ಎಂದು ಹೆದರಿಸಿದ್ದರು. ಒಂದು ವೇಳೆ ತಪ್ಪು ಹೇಳಿಕೆ ನೀಡಿದರೆ, ಅದೇ ಜಾಗದಲ್ಲಿ ಹೂತು ಹಾಕುವುದಾಗಿ ಗ್ಯಾಂಗ್ ಬೆದರಿಕೆ ಹಾಕಿತ್ತು. ನನ್ನ ಕೈಗೆ ಬುರುಡೆ ಕೊಟ್ಟು ಫೋಟೋ ತೆಗೆಸಿಕೊಂಡಿದ್ದರು. ಸುಜಾತಾ ಭಟ್ ಎಂಬುವರ ಜತೆ ದೆಹಲಿಗೆ ಕರೆದೊಯ್ದು ಕಂಡಕಂಡಲ್ಲಿ ಸಹಿ ಹಾಕಿಸಿಕೊಂಡರು. ವಕೀಲರ ಕಚೇರಿಯಲ್ಲಿ ಕೂರಿಸಿ ಹೇಗೆ ಹೇಳಿಕೆ ನೀಡಬೇಕೆಂದು ತರಬೇತಿ ನೀಡಲಾಗಿತ್ತು. ನನ್ನನ್ನು ಸಂಪೂರ್ಣವಾಗಿ ಒತ್ತೆಯಾಳುವಿನಂತೆ ಇರಿಸಿಕೊಳ್ಳಲಾಗಿತ್ತು. ನನಗೆ ಹಾಕಲಾಗಿದ್ದ ಮಾಸ್ಕ್‌ನ ಹಿಂದೆ ಹೆಡ್‌ಫೋನ್ ಇರಿಸಲಾಗಿತ್ತು. ಅದರಲ್ಲಿ ಕ್ಷಣಕ್ಷಣಕ್ಕೂ ನಾನು ಏನು ಮಾತನಾಡಬೇಕು ಎಂಬ ಸೂಚನೆಗಳು ಬರುತ್ತಿದ್ದವು. ಈ ಮಾನಸಿಕ ಕಿರುಕುಳ ತಾಳಲಾರದೆ ನಾನು ಒಮ್ಮೆ ಆತ್ಮ*ಹ*ತ್ಯೆಗೂ ಯತ್ನಿಸಿದ್ದೆ ಎಂದು ಚಿನ್ನಯ್ಯ ಎಂದು ಚಿನ್ನಯ್ಯ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.

“ತಪ್ಪಿತಸ್ಥರೆಲ್ಲರೂ ಹೊರಗಡೆ ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಕಾನೂನು ಕ್ರಮ ಜರುಗಿಸುವುದಾದರೆ ಇಡೀ ಷಡ್ಯಂತ್ರ ರೂಪಿಸಿದ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಚಿನ್ನಯ್ಯ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಸದ್ಯ ಹೈಕೋರ್ಟ್ ಸರ್ಕಾರ ಮತ್ತು ಎಸ್‌ಐಟಿಗೆ ನೋಟಿಸ್ ನೀಡಿರುವುದರಿಂದ, ಜೂನ್ 29ರ ಮುಂದಿನ ವಿಚಾರಣೆಯೊಳಗೆ ಎಸ್‌ಐಟಿ ಯಾವ ರೀತಿಯ ವರದಿ ಸಲ್ಲಿಸಲಿದೆ ಮತ್ತು ಈ ಹೈಪ್ರೊಫೈಲ್ ಬುರುಡೆ ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

TAGGED:Actor Prakash Raj in Dharmasthala Burude case! 200 crore funding from Kerala
Share This Article
Facebook Twitter Copy Link Print
Previous Article ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!
Next Article Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

Popular Posts

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ನಟ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

You Might Also Like

ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?