newsics.com/ನ್ಯೂಸಿಕ್ಸ್
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ.
ಮಹಾರಾಣಿ ಅಂಡರ್ ಪಾಸ್ ರಸ್ತೆ ಬಳಕೆ ಕಡ್ಡಾಯ: ಕೆ.ಜಿ. ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ಕ್ರಾಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ರಸ್ತೆಯನ್ನು ಬಳಸಬೇಕಾಗುತ್ತದೆ.
ಸಂಚಾರ ನಿಷೇಧ: ಫ್ರೀಡಂ ಪಾರ್ಕ್ ಜಂಕ್ಷನ್ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಈ ರಸ್ತೆಯಲ್ಲಿ ಸದ್ಯಕ್ಕೆ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.
ಹಳೇ ಜೆ.ಡಿ.ಎಸ್ ಕಚೇರಿ ರಸ್ತೆ ಬಳಸಿ: ಖೋದೇ ಜಂಕ್ಷನ್ ಕಡೆಯಿಂದ ಕೆ.ಆರ್. ಸರ್ಕಲ್ ಕಡೆಗೆ ಹೋಗುವ ಫ್ಲೈಓವರ್ ರಸ್ತೆಯಲ್ಲಿ, ರೈಲ್ವೇ ನಿಲ್ದಾಣದಿಂದ ಪ್ರತಿಭಟನಾಕಾರರು ಕಾಲ್ನಡಿಗೆಯಲ್ಲಿ ಬರುವುದರಿಂದ ವಾಹನ ದಟ್ಟಣೆ ಉಂಟಾಗಬಹುದು. ಇದನ್ನು ತಡೆಗಟ್ಟಲು ಸವಾರರು ಹಳೇ ಜೆ.ಡಿ.ಎಸ್ ಕಚೇರಿ ರಸ್ತೆಯನ್ನು ಬಳಸಬಹುದಾಗಿದೆ.
ದ್ವಿಮುಖ ಸಂಚಾರಕ್ಕೆ ಅವಕಾಶ: ಸುಬ್ಬಣ್ಣ ಜಂಕ್ಷನ್ನಿಂದ ಎಂ.ಟಿ.ಆರ್ ಜಂಕ್ಷನ್ ಕಡೆಗೆ ಬರುವ ಏಕಮುಖ ಸಂಚಾರದ ರಸ್ತೆಯನ್ನು ತಾತ್ಕಾಲಿಕವಾಗಿ ದ್ವಿಮುಖ (Two-way) ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ. ಗಾಂಧಿನಗರ ಕಡೆಗೆ ಬರುವ ವಾಹನ ಸವಾರರು ಈ ರಸ್ತೆಯನ್ನು ಬಳಸಬಹುದು.
Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ