newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಮತ್ತು ಪವನ್ ಖೇರಾ ಹಾಗೂ ಬಿಜೆಪಿಯ ಎಂ. ನಾಗರಾಜು ಅವರು ಮತದಾನವಿಲ್ಲದೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಘೋಷಿಸಿದ್ದಾರೆ.
ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್, ಪವನ್ ಖೇರಾ ಹಾಗೂ ಬಿಜೆಪಿಯ ಎಂ.ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂವರು ಅಭ್ಯರ್ಥಿಗಳಿಗೆ ವಿಧಾನಸಭೆ ಕಾರ್ಯದರ್ಶಿ ಪ್ರಮಾಣಪತ್ರ ನೀಡಿದ್ದಾರೆ. ನಾಳೆ ವಿಧಾನಸೌಧಕ್ಕೆ ಮಲ್ಲಿಕಾರ್ಜುನ ಖರ್ಗೆ ಖುದ್ದು ಆಗಮಿಸಿ ನಾಮಪತ್ರ ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ದ್ವಿತೀಯ ಪಿಯುಸಿಯಲ್ಲಿ 4ನೇ ರ್ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ