newsics.com/ನ್ಯೂಸಿಕ್ಸ್
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ದೊಡ್ಡ ಮಟ್ಟದ ಸುಧಾರಣೆಗೆ ಮುಂದಾಗಿದೆ.
ಯೋಜನೆಯಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳು ಹಾಗೂ ನಕಲಿ ಅರ್ಹತೆಗಳ ಹಾವಳಿಗೆ ಶಾಶ್ವತವಾಗಿ ಬ್ರೇಕ್ ಹಾಕಲು ಮುಂದಾಗಿರುವ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ.
ಯೋಜನೆಯ ದುರುಪಯೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಈ ಹೊಸ ನಿಯಮದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಮಾಸಿಕ ಹಣವನ್ನು ನಿರಂತರವಾಗಿ ಪಡೆಯಲು ಪ್ರತಿಯೊಬ್ಬ ಫಲಾನುಭವಿಯು ತಮ್ಮ ಹೆಬ್ಬೆಟ್ಟಿನ ಗುರುತು , ಕಣ್ಣುಗಳ ಸ್ಕ್ಯಾನಿಂಗ್ ಅಥವಾ ಮುಖದ ಗುರುತನ್ನು ನೀಡಿ ತಮ್ಮ ಜೀವಂತಿಕೆ ಹಾಗೂ ಅರ್ಹತೆಯನ್ನು ಸಾಬೀತುಪಡಿಸಬೇಕಾಗುತ್ತದೆ.
ಈ ಸೇವೆ ಎಲ್ಲಿ ಲಭ್ಯ? ಬೇಕಾದ ದಾಖಲೆಗಳೇನು? : ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರ, ಗ್ರಾಮ ಒನ್ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಈ ಸೇವೆ ಲಭ್ಯವಿದೆ. ಈ ಯೋಜನೆ ಲಾಭ ಪಡೆಯಲು ಪ್ರತಿಯೊಬ್ಬ ಮಹಿಳೆಯೂ ತಮ್ಮ ಆಧಾರ್ ಕಾರ್ಡ್ ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈ ಹಿಂದೆ ನೀಡಿರುವ ಗೃಹಲಕ್ಷ್ಮಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.
ಇದಲ್ಲದೆ ಫಲಾನುಭವಿಗಳು ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡದ (ST) ಸಮುದಾಯಕ್ಕೆ ಸೇರಿದವರಾಗಿದ್ದರೆ, ತಮ್ಮ ಅಧಿಕೃತ ಜಾತಿ ಪ್ರಮಾಣಪತ್ರದಲ್ಲಿ ನಮೂದಾಗಿರುವ ಆರ್ ಡಿ (RD) ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ. ಈ ಸಂಪೂರ್ಣ ಫಾರ್ಮ್ ಅನ್ನು ಯಶಸ್ವಿಯಾಗಿ ಭರ್ತಿ ಮಾಡಿ ಬಯೋಮೆಟ್ರಿಕ್ ಪ್ರಕ್ರಿಯೆ ಮುಗಿದ ನಂತರವೇ ಮುಂದಿನ ತಿಂಗಳ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ.
Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ