newsics.com/ನ್ಯೂಸಿಕ್ಸ್
ಉಡುಪಿ: ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನಾಳೆ ಜೂನ್ 12ರಂದು ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ.
ಸಿಎಂ ಜೋಸೆಫ್ ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ ಭಕ್ತಾದಿಗಳಿಗೆ ದರ್ಶನದ ವೇಳೆ ಅನಾನುಕೂಲವಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆಯು ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ.
ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೇವಲ ದೇವಿಯ ದರ್ಶನ ಮತ್ತು ವಿಶೇಷ ಪೂಜೆಗಾಗಿ ಮಾತ್ರ ಕೊಲ್ಲೂರಿಗೆ ಆಗಮಿಸುತ್ತಿದ್ದು, ಪೂಜೆಯ ಬಳಿಕ ನಾಳೆಯೇ ತಮಿಳುನಾಡಿಗೆ ಹಿಂದಿರುಗಲಿದ್ದಾರೆ. ಈ ಪ್ರವಾಸದ ವೇಳೆ ಅವರ ಯಾವುದೇ ಸಾರ್ವಜನಿಕ ಭೇಟಿ ಅಥವಾ ರಾಜಕೀಯ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ವಿವಿಐಪಿ ಭೇಟಿ ಮತ್ತು ವಿಶೇಷ ಭದ್ರತಾ ಹಿತದೃಷ್ಟಿಯಿಂದ ಜೂನ್ 12ರ ಮಧ್ಯಾಹ್ನ 12:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಭಕ್ತಾದಿಗಳು ದೇವಸ್ಥಾನಕ್ಕೆ ಬರುವುದನ್ನು ಮತ್ತು ದರ್ಶನ ಪಡೆಯುವುದನ್ನು ತಪ್ಪಿಸುವುದು ಸೂಕ್ತ ಎಂದು ಹೇಳಲಾಗಿದೆ.
Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ