newsics.com/ನ್ಯೂಸಿಕ್ಸ್
ನೆರೆರಾಜ್ಯ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಒಂದು ಮೈ ನಡುಗಿಸುವ ರೋಮಾಂಚನಕಾರಿ ಘಟನೆ ನಡೆದಿದೆ ಬಿಡುವಿಲ್ಲದ ಹೆದ್ದಾರಿಯ ಮಧ್ಯೆ ಒಂಟಿಯಾಗಿ ಕುಳಿತಿದ್ದ ಪುಟಾಣಿ ಕಂದಮ್ಮನನ್ನು ಖಾಸಗಿ ಬಸ್ಸೊಂದರ ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯ ಕೊಂಡೊಟ್ಟಿ ಸಮೀಪದ ಪುಲಿಕ್ಕಲ್ನ ಕಿನಾರಪಡಿ ಬಳಿಯ ಒಲವತ್ತೂರು-ಫಾರೂಕ್ ಪಿಡಬ್ಲ್ಯೂಡಿ ರಸ್ತೆಯಲ್ಲಿ ಬೆಳಗ್ಗೆ ಸುಮಾರು 8.30ಕ್ಕೆ ಈ ಘಟನೆ ಸಂಭವಿಸಿದೆ. ಒಲವತ್ತೂರಿನಿಂದ ಫಾರೂಕ್ಗೆ ಸಫಾ ಮರ್ವಾ ಎಂಬ ಖಾಸಗಿ ಬಸ್ ಸಂಚರಿಸುತ್ತಿತ್ತು.
ಬಸ್ ವೇಗವಾಗಿ ತಿರುವಿನಲ್ಲಿ ಬರುತ್ತಿದ್ದಂತೆ, ಚಾಲಕ ರಾಮಚಂದ್ರನ್ ಅವರಿಗೆ ರಸ್ತೆಯ ಮಧ್ಯದಲ್ಲಿ ಏನೋ ಒಂದು ಮಗು ಒಂಟಿಯಾಗಿ ಕುಳಿತಿರುವುದು ತಕ್ಷಣವೇ ಕಣ್ಣಿಗೆ ಬಿದ್ದಿದೆ. ಜಾಗರೂಕರಾಗಿದ್ದ ಚಾಲಕ ಕ್ಷಣಾರ್ಧದಲ್ಲಿ ಭೀಕರ ಬ್ರೇಕ್ ಹಾಕಿ ಬಸ್ಸನ್ನು ಮಗುವಿನ ಅತ್ಯಂತ ಹತ್ತಿರದಲ್ಲಿ ಸುರಕ್ಷಿತವಾಗಿ ನಿಲ್ಲಿಸಿದ್ದಾರೆ
ಬಸ್ ನಿಲ್ಲುತ್ತಿದ್ದಂತೆ ಸೀಟಿನಿಂದ ಜಿಗಿದ ನಿರ್ವಾಹಕ (ಕಂಡಕ್ಟರ್) ನವಾಸ್ ಅಲಿ, ರಸ್ತೆಗೆ ಓಡಿಹೋಗಿ ಮಗುವನ್ನು ಎತ್ತಿಕೊಂಡು ಮುದ್ದಾಡಿ, ಸುರಕ್ಷಿತವಾಗಿ ಅವರ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.
ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!