newsics.com/ನ್ಯೂಸಿಕ್ಸ್
ಬೆಂಗಳೂರು/ ಉತ್ತರಕನ್ನಡ: ಮುಂದಿನ ಕೇವಲ 1 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭೀಕರ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಬರೋಬ್ಬರಿ 30 ರಿಂದ 40 ಕಿ.ಮೀ ವೇಗದಲ್ಲಿ ಭಯಾನಕ ಬಿರುಗಾಳಿ ಬೀಸಲಿದ್ದು, ಮರಗಳು, ವಿದ್ಯುತ್ ಕಂಬಗಳು ಧರೆಗುರುಳುವ ಭೀತಿ ಎದುರಾಗಿದೆ.
ಒಂದೆಡೆ ಉತ್ತರದಲ್ಲಿ ಮಳೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಒಳನಾಡಿಗೆ ಮುಂದಿನ ಬರೋಬ್ಬರಿ 10 ದಿನಗಳವರೆಗೂ ಮಳೆಯಿಂದ ಮುಕ್ತಿ ಸಿಗುವ ಲಕ್ಷಣಗಳೇ ಇಲ್ಲ! ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ ಭಾಗಗಳಲ್ಲಿ ಸಾಧಾರಣ ಮಳೆಯಾಗುವುದು ಪಕ್ಕಾ ಎನ್ನಲಾಗಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈಗಿನ ವರದಿ ಪ್ರಕಾರ, ಜೂನ್ 17ರ ತನಕ ಇದೇ ವಾತಾವರಣ ಮುಂದುವರಿಯಲಿದ್ದು, ಆ ನಂತರವಷ್ಟೇ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ. ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮುಂದಿನ 2 ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಕೇವಲ ಮೋಡ ಕವಿದ ವಾತಾವರಣ ಇರಲಿದ್ದು, 2 ದಿನಗಳ ಬಳಿಕ ಮಳೆಯ ಪ್ರಮಾಣ ಸಂಪೂರ್ಣ ತಗ್ಗಲಿದೆ.
ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು