newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ದಿಢೀರ್ ಮಳೆ ಸುರಿಯುವ ಶೇ. 50 ರಷ್ಟು ಗಂಡಾಂತರ ಎದುರಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಜಿಲ್ಲಾಡಳಿತಗಳು ರೆಡ್ ಹಾಗೂ ಹೈ-ಅಲರ್ಟ್ ವಾರ್ನಿಂಗ್ ನೀಡಿವೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಅತ್ಯಂತ ಪ್ರಬಲವಾಗಿರಲಿದೆ. ಬಹುತೇಕ ಕಡೆ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಸಮುದ್ರ ತೀರದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಭೀಕರ ಬಿರುಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಠಿಣ ಎಚ್ಚರಿಕೆ ನೀಡಲಾಗಿದೆ
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗ ಭಾಗದಲ್ಲಿ ಮುಂಗಾರು ಸಂಪೂರ್ಣ ಆವರಿಸಿಕೊಂಡಿದ್ದು, ಇಂದಿನಿಂದ 3 ದಿನಗಳ ಕಾಲ ಭೀಕರ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.
ಜಲಾನಯನ ಪ್ರದೇಶಗಳಲ್ಲಿ ನೀರು ಹರಿಯುತ್ತಿರುವುದರಿಂದ ಹಳ್ಳಕೊಳ್ಳ ಹಾಗೂ ನದಿಗಳ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗತೊಡಗಿದೆ. ತಗ್ಗು ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ಇರುವಂತೆ ಸೂಚಿಸಲಾಗಿದೆ.
ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?