Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

Share
3 Min Read
SHARE

ರಾಜ್ಯದ ಅರ್ಹ ಫಲಾನುಭವಿಗಳಲ್ಲಿ ಒಬ್ಬರಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಕಟ್ ಆಗಬಾರದು. ಆದರೆ, ಯೋಜನೆಯ ಹೆಸರಲ್ಲಿ ನಡೆಯುತ್ತಿರೋ ಬಿಗ್ ಫ್ರಾಡ್ ಮತ್ತು ದುರುಪಯೋಗಕ್ಕೆ ಮಾತ್ರ ತಕ್ಷಣವೇ ಬ್ರೇಕ್ ಬೀಳಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಹೈಲೆವೆಲ್ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಈ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಸತ್ತವರ ಹೆಸರಲ್ಲೂ ಹಣ ಡ್ರಾ ಆಗ್ತಿರೋದು ಮತ್ತು ಬೇರೆ ರಾಜ್ಯದವರ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿರುವ ಭೀಕರ ಹಗರಣ ಬೆಳಕಿಗೆ ಬಂದಿದ್ದು, ಸಿಎಂ ಅಧಿಕಾರಿಗಳ ಮೇಲೆ ಫುಲ್ ಗರಂ ಆಗಿದ್ದಾರೆ.

ಲೋನ್ ಅಕೌಂಟ್‌ ಜಮೆ ಮತ್ತು ವಾಯ್ಸ್ ಮೆಸೇಜ್ ಅಲರ್ಟ್

ಬಹಳಷ್ಟು ಮಹಿಳಾ ಫಲಾನುಭವಿಗಳು ಬ್ಯಾಂಕ್‌ಗಳಲ್ಲಿ ಸಾಲ (Loan) ಪಡೆದಿರುತ್ತಾರೆ. ಗೃಹಲಕ್ಷ್ಮಿಯ ₹2,000 ಹಣ ಬಂದ ತಕ್ಷಣ ಬ್ಯಾಂಕಿನವರು ಆ ಹಣವನ್ನು ಸಾಲದ ಮೊತ್ತಕ್ಕೆ ಕಟ್ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಬೇಸತ್ತು ಮಹಿಳೆಯರು ಬ್ಯಾಂಕ್ ಖಾತೆ ಬದಲಾಯಿಸುತ್ತಿದ್ದಾರೆ. ಇಂತಹ ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಸಿಎಂ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ, ಗೃಹಲಕ್ಷ್ಮಿ ಹಣ ಅಕೌಂಟ್‌ಗೆ ಜಮೆಯಾದ ತಕ್ಷಣ ಮಹಿಳೆಯರ ಮೊಬೈಲಿಗೆ ‘ವಾಯ್ಸ್‌ ಮೆಸ್ಸೇಜ್‌’ (Voice Message) ಮೂಲಕ ಕನ್ಫರ್ಮೇಷನ್ ಕಳುಹಿಸುವ ಹೊಸ ವ್ಯವಸ್ಥೆ ತರಲು ಆರ್ಡರ್ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ವ್ಯಕ್ತವಾದ 11 ಪ್ರಮುಖ ಅಂಶಗಳು ಹೀಗಿವೆ

1.ಏರ್‌ಟೆಲ್ ಬ್ಯಾಂಕ್ ಫ್ರಾಡ್: ಏರ್‌ಟೆಲ್‌ ಬ್ಯಾಂಕ್‌ನಲ್ಲಿ ನಕಲಿ ಯುಪಿಐ (UPI) ಖಾತೆಗಳನ್ನು ತೆರೆದು ಗೃಹಲಕ್ಷ್ಮಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಆಘಾತಕಾರಿ ಪ್ರಕರಣಗಳು ಪತ್ತೆಯಾಗಿವೆ

2.ಕರ್ನಾಟಕದ ಖಾತೆಗಳಿಗೆ ಮಾತ್ರ ಹಣ: ಗೃಹಲಕ್ಷ್ಮಿ ಹಣ ಪಡೆಯುವ ಬ್ಯಾಂಕ್ ಖಾತೆಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯದಲ್ಲೇ ಇರಬೇಕು. ಇತರೆ ರಾಜ್ಯಗಳಲ್ಲಿರುವ ಖಾತೆಗಳಿಗೆ ಹಣ ಹೋಗುತ್ತಿರುವುದಕ್ಕೆ ತಕ್ಷಣ ತಡೆ ಹಾಕಲು ಸೂಚಿಸಲಾಗಿದೆ.

3.ಬೇರೆ ರಾಜ್ಯದ ವೋಟರ್ಸ್‌ಗೆ ನೋ ಎಂಟ್ರಿ: ನಮ್ಮ ರಾಜ್ಯದ ತೆರಿಗೆ ಹಣದ ಯೋಜನೆಗಳು ನಮ್ಮ ರಾಜ್ಯದ ಜನರಿಗೆ ಮಾತ್ರ ಸಿಗಬೇಕು. ಪಕ್ಕದ ರಾಜ್ಯದ ಮತದಾರರು ಇದರ ಲಾಭ ಪಡೆಯುತ್ತಿರುವುದನ್ನು ತಡೆಯಲೇಬೇಕು.

4.ಸ್ವಯಂಪ್ರೇರಿತ ಗಿವ್-ಅಪ್ (Give up): ಆರ್ಥಿಕವಾಗಿ ಸಬಲರಾಗಿರುವ ಯಾರಾದರೂ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟುಕೊಟ್ಟರೆ, ಆ ಹಣವನ್ನು ಮತ್ತೊಬ್ಬ ಬಡ ಫಲಾನುಭವಿಗೆ ನೀಡಲು ಅಂಥವರನ್ನು ಪ್ರೋತ್ಸಾಹಿಸಬೇಕು.

5.ಕೇಂದ್ರದ ನೀತಿಗಳ ಚರ್ಚೆ: ಕೇಂದ್ರ ಸರ್ಕಾರದ ನೀತಿಗಳಿಂದ ಬಡವರು ಮತ್ತು ಮಧ್ಯಮ ವರ್ಗದವರ ಮೇಲೆ ಬೀಳುತ್ತಿರುವ ಆರ್ಥಿಕ ಹೊರೆ, ಬೆಲೆ ಏರಿಕೆ ಮತ್ತು ತಲಾ ಆದಾಯ ಕುಸಿಯುತ್ತಿರುವ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು.

6.ತಾಂತ್ರಿಕ ದೋಷಗಳು: ಗೃಹಲಕ್ಷ್ಮಿ ಯೋಜನೆ ಜಾರಿಯಲ್ಲಿ ಅಡ್ಡಿಯಾಗುತ್ತಿರುವ ಎರಡು ಪ್ರಮುಖ ತಾಂತ್ರಿಕ ಸಮಸ್ಯೆಗಳ (Technical Issues) ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ಸರಿಪಡಿಸಲು ಸೂಚಿಸಲಾಯಿತು.

7.ಮೃತರ ಇ-ಕೆವೈಸಿ ಲಿಂಕ್: ಮರಣ ಹೊಂದಿದ ಫಲಾನುಭವಿಗಳ ಡೇಟಾ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ. ಇದರಿಂದಾಗಿ ಇ-ಕೆವೈಸಿ (e-KYC) ಹಾಗೂ ಬ್ಯಾಂಕ್‌ ಖಾತೆ/ಎನ್‌.ಪಿ.ಸಿ.ಐ (NPCI) ನಿಷ್ಕ್ರಿಯವಾಗಿರುವ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ಆದೇಶಿಸಲಾಗಿದೆ.

8.ಆಡಿಟರ್ ಜನರಲ್ (AG) ವರದಿ: ಎಜಿ ವರದಿಯಲ್ಲಿ ಉಲ್ಲೇಖವಾಗಿರುವ ಗಂಭೀರ ಲೋಪದೋಷಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಕಠಿಣ ಕ್ರಮಕ್ಕೆ ಸಿಎಂ ಮುಂದಾಗಿದ್ದಾರೆ.

8.₹60 ಕೋಟಿ ಲೂಟಿ ಮರುಪಡೆಯಲು ಆದೇಶ: ಒಂದೇ ಬ್ಯಾಂಕ್ ಖಾತೆಯನ್ನು ಬಳಸಿ ಹಲವು ಫಲಾನುಭವಿಗಳು ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ ಈ ರೀತಿ ಮೂರು ಲಕ್ಷ ಕಂತುಗಳಲ್ಲಿ ಒಟ್ಟು 60 ಕೋಟಿ ರೂಪಾಯಿ ಹಣ ಬೇರೆಯವರ ಪಾಲಾಗಿದೆ. ಈ ಲೂಟಿ ಹೊಡೆದ ಹಣವನ್ನು ತಕ್ಷಣವೇ ಮರುಪಡೆಯಲು (Recovery) ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

9.ಒಬ್ಬರಿಗೆ ಒಂದೇ ಅಕೌಂಟ್: ಒಬ್ಬರೇ ವ್ಯಕ್ತಿ ಹಲವು ಖಾತೆಗಳನ್ನು ನೋಂದಾಯಿಸಿ ಹಣ ಲೂಟಿ ಮಾಡುತ್ತಿರುವುದನ್ನು ಎಜಿ ವರದಿ ಎತ್ತಿ ತೋರಿಸಿದ್ದು, ಇದಕ್ಕೆ ತಕ್ಷಣ ಬ್ರೇಕ್ ಹಾಕಲು ವ್ಯವಸ್ಥೆ ಮಾಡಲಾಗುತ್ತಿದೆ.

10.ಅರ್ಜಿಗಳ ನೈಜತೆ ತಪಾಸಣೆ: ಹಿಂದೆ ಪಡೆದ ಅರ್ಜಿಗಳಲ್ಲಿ ಉಲ್ಲೇಖವಾಗಿರುವ ದಾಖಲೆಗಳ ನೈಜತೆಯನ್ನು ಅಧಿಕಾರಿಗಳು ವೆರಿಫೈ ಮಾಡದಿರುವುದು ಪತ್ತೆಯಾಗಿದ್ದು, ಇಡೀ ಸಿಸ್ಟಮ್ ಅನ್ನು ರೀ-ಚೆಕ್ ಮಾಡಿ ಸರಿಪಡಿಸಲು ಸಿಎಂ ಡಿಕೆಶಿ ಆರ್ಡರ್ ಮಾಡಿದ್ದಾರೆ.

11.ಗ್ಯಾರಂಟಿ ಯೋಜನೆಗಳ ಅಗತ್ಯವಿಲ್ಲದ ಫಲಾನುಭವಿಗಳು ಸ್ವಯಂಪ್ರೇರಿತವಾಗಿ ಯೋಜನೆಗಳಿಂದ ಹೊರಬಂದು ಅರ್ಹರಿಗೆ ನೆರವಾಗಲು ಮುಂದಾದರೆ, ಅಂತಹವರನ್ನು ಗುರುತಿಸಿ ಪ್ರೋತ್ಸಾಹಿಸುವಂತೆ ಸೂಚಿಸಲಾಗಿದೆ‌.

ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಇಟ್ಟರೆ ಸಂಕಷ್ಟ ತಪ್ಪಿದ್ದಲ್ಲ

TAGGED:Controversy over depositing Grihalakshmi money into accounts in other states: 11 instructions issued to prevent misuse
Share This Article
Facebook Twitter Copy Link Print
Previous Article ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಇಟ್ಟರೆ ಸಂಕಷ್ಟ ತಪ್ಪಿದ್ದಲ್ಲ
Next Article ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

Popular Posts

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

You Might Also Like

ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read
ಕರ್ನಾಟಕಪ್ರಮುಖ

Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

2 Min Read
ಕರ್ನಾಟಕಪ್ರಮುಖಮನರಂಜನೆ

BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

2 Min Read
ಪ್ರಮುಖಮನರಂಜನೆ

ಕೊಡಗಿನಲ್ಲಿರುವ ರಶ್ಮಿಕಾ ಕನಸಿನ ಮನೆ ಒಳಗೆ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?