ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿದ್ದು, ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಣ್ಣು ಕೆಂಪಾಗುವಂತೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತುರ್ತು ದೆಹಲಿಗೆ ಬುಲಾವ್ ನೀಡಿದ್ದಾರೆ.
ಬುಧವಾರ (ಜೂನ್ 23) ರಂದು ದೆಹಲಿಗೆ ಬರುವಂತೆ ನಾಯಕರಿಗೆ ಬುಲಾವ್ ನೀಡಿದ್ದು, ಅಡ್ಡಮತದಾನದ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ. ಹಾಗೆಯೇ, ಅಡ್ಡಮತದಾನಕ್ಕೆ ಕಾರಣವೇನು ಎನ್ನುವುದರ ಕುರಿತು ಚರ್ಚೆ ನಡೆಸಲಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಶಾಸಕರು ಅಡ್ಡ ಮತದಾನ ಮಾಡಿರುವ ಬಗ್ಗೆ ಪಕ್ಷದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಜೂನ್ 23 ರಂದು ದೆಹಲಿಗೆ ಕರೆಸಲಾಗಿದೆ ಎಂದು ಟೈಮ್ಸ್ ನೌ ನವಭಾರತ್ ವರದಿ ಮಾಡಿದೆ.
ಕರ್ನಾಟಕದ 11 ಎನ್ಡಿಎ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ, ಇದು ಬಿಜೆಪಿ ಹೈಕಮಾಂಡ್ ಅನ್ನು ಕೆರಳಿಸಿದ್ದು, ತುರ್ತು ಬುಲಾವ್ ನೀಡಿದೆ.
ಮೈತ್ರಿ ಪಕ್ಷ ಜೆಡಿಎಸ್ ಅಭ್ಯರ್ಥಿ ಕರ್ನಾಟಕ ಪರಿಷತ್ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನದಿಂದ ಸೋಲನ್ನು ಅನುಭವಿಸಿದ್ದಾರೆ. ಇದಕ್ಕೆ ಜೆಡಿಎಸ್ ಮತ್ತು ಬಿಜೆಪಿ ಶಾಸಕರ ಅಡ್ಡಮತದಾನವೇ ಕಾರಣವಾಗಿದೆ.
ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದಿದೆ
ಗುರುವಾರ ನಡೆದ ಏಳು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಎರಡೂ ಪಕ್ಷದ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ, ಇದರಿಂದಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ನಿರೀಕ್ಷೆಗಿಂತ ಹೆಚ್ಚಿನ ಮತ ಹಂಚಿಕೆಯಾಗಿದೆ. ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು, ಪರಿಣಾಮವಾಗಿ ಎಲ್ಲಾ 222 ಶಾಸಕರು ತಮ್ಮ ಮತಗಳನ್ನು ಚಲಾಯಿಸಿದ್ದರು.
ಚುನಾವಣೆಯಲ್ಲಿ ಯಾರೆಲ್ಲಾ ಸ್ಪರ್ಧಿಸಿದ್ದರು?
ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ತಿಪ್ಪಣ್ಣಪ್ಪ ಕಮಕನೂರ, ಪಿ.ವಿ. ಮೋಹನ್, ಬಿ.ಕೆ. ಹರಿಪ್ರಸಾದ್ (ರಾಜ್ಯ ಕಾಂಗ್ರೆಸ್ ಅಧ್ಯಕ್ಷ), ಶಿವಣ್ಣ ಬಿ.ಎಸ್., ವಿನಯ್ ಕಾರ್ತಿಕ್ ಪ್ರಕಾಶ್ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ್ದಾರೆ
ಬಿಜೆಪಿಯಿಂದ ಲಿಂಗರಾಜ್ ಪಾಟೀಲ್ ಮತ್ತು ರಘು ಆರ್. ಗೆಲುವು ಕಂಡಿದ್ದಾರೆ. ಆದರೆ, ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ಗೋವಿಂದರಾಜು ಸೋತಿದ್ದರು.
ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ NDA ಯಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ JD(S) ಪಕ್ಷ ಕೂಡ ಸೇರಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ, JD(S) ಅಭ್ಯರ್ಥಿಯು ಐದನೇ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ತೀವ್ರ ಪೈಪೋಟಿಯಲ್ಲಿ ಸೋತರು.
ಜೂನ್ 30 ರಂದು ಏಳು ಸದಸ್ಯರ ಅವಧಿ ಮುಕ್ತಾಯಗೊಳ್ಳುವುದರಿಂದ ವಿಧಾನ ಪರಿಷತ್ತಿನ ಚುನಾವಣೆ ನಡೆಸಲಾಗಿತ್ತು. ಇವರಲ್ಲಿ ಕಾಂಗ್ರೆಸ್ನ ನಾಸೀರ್ ಅಹ್ಮದ್, ತಿಪ್ಪಣ್ಣಪ್ಪ ಮತ್ತು ಬಿ.ಕೆ. ಹರಿಪ್ರಸಾದ್, ಬಿಜೆಪಿಯ ಎನ್. ನಾಗರಾಜು (MTB), ಪ್ರತಾಪ್ ಎಸ್. ನಾಯಕ್ ಕೆ. ಮತ್ತು ಸುನಿಲ್ ವಲ್ಲಾಯಪುರ ಮತ್ತು JD(S) ನ ಗೋವಿಂದರಾಜು ಸೇರಿದ್ದಾರೆ.
ಇದೀಗ, ರಾಷ್ಟ್ರೀಯ ಅಧ್ಯಕ್ಷರ ಬುಲಾವ್ ಇದೀಗ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಅಧ್ಯಕ್ಷ ಮತ್ತು ಪ್ರತಿಪಕ್ಷದ ನಾಯಕರ ಬದಲಾವಣೆಯಾಗಲಿದೆಯಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ.
ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?