newsics.com | ನ್ಯೂಸಿಕ್ಸ್
ಉದಯೋನ್ಮುಖ ಯುವ ನಿರ್ದೇಶಕರೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಬಿದಲೂರಿನ ನಿವಾಸಿ ಮಂಜುನಾಥ್ (35) ಆತ್ಮಹತ್ಯೆಗೆ ಶರಣಾದವರು.
ಕಿರುಚಿತ್ರಗಳನ್ನು ನಿರ್ದೇಶಿಸಿದ್ದ ಮಂಜುನಾಥ್, ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಬೇಕು ಎಂಬ ಮಹದಾಸೆ ಹೊಂದಿದ್ದರು. ಆದರೆ ಅವರಿಗೆ ಸೂಕ್ತ ಅವಕಾಶಗಳು ಸಿಗುತ್ತಿರಲಿಲ್ಲ. ಇದರಿಂದ ನಿರಾಶರಾಗಿದ್ದರು. ಅಲ್ಲದೇ ಹಲವು ದಿನಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು, ಖಿನ್ನತೆಯಿಂದ ಹೊರಬರಲಾರದೇ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ. ಡೆತ್ ನೋಟ್ನಲ್ಲಿ ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ಬಿಡಿ. ನಿಮಗೆ ಒಳ್ಳೆಯ ಮಗನಾಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ
₹100 ಪ್ರಯಾಣಕ್ಕೆ ₹2,400 ವಸೂಲಿ! ಬೆಂಗಳೂರಿಗೆ ಮೊದಲ ಬಾರಿಗೆ ಬಂದ ಯುವಕರಿಗೆ ಆಟೋ ಚಾಲಕನ ಕಿರುಕುಳ