Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್
ಕರ್ನಾಟಕದೇಶಪ್ರಮುಖ

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

Share
2 Min Read
SHARE

newsics. com| ನ್ಯೂಸಿಕ್ಸ್
ಬ್ಯಾಂಕ್ ಗ್ರಾಹಕರು ತಮ್ಮ ಖಾತೆಗಳಲ್ಲಿ ಕನಿಷ್ಠ ಠೇವಣಿಯನ್ನು ಕಾಯ್ದುಕೊಳ್ಳದಿದ್ದಾಗ ಬ್ಯಾಂಕುಗಳು ವಿಧಿಸುವ ದಂಡದ ಮೊತ್ತಕ್ಕೆ ಜಿಎಸ್‌ಟಿ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಖಾತೆಯಲ್ಲಿ ಕನಿಷ್ಠ ಮೊತ್ತವನ್ನು ನಿರ್ವಹಿಸುವುದು ಬ್ಯಾಂಕ್ ಮತ್ತು ಗ್ರಾಹಕರ ನಡುವಿನ ಒಪ್ಪಂದದ ಒಂದು ನಿಯಮವಾಗಿದ್ದು, ಅದು ತೆರಿಗೆ ವಿಧಿಸಬಹುದಾದ ಯಾವುದೇ ಸೇವಾ ಶುಲ್ಕವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಖಾತೆಗಳಲ್ಲಿ ಕನಿಷ್ಠ ಸರಾಸರಿ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ವಿಧಿಸುವ ದಂಡಕ್ಕೆ ಜಿಎಸ್​ಟಿ ಪಾವತಿಸುವಂತೆ ಜಿಎಸ್​ಟಿ ಮಂಡಳಿ ಜಾರಿ ಮಾಡಿದ್ದ ನೋಟಿಸ್​ ರದ್ದು ಕೋರಿ ಕೆನರಾ ಬ್ಯಾಂಕ್​, ಬ್ಯಾಂಕ್​ ಆಫ್​ ಬರೋಡಾ ಮತ್ತು ಕರ್ನಾಟಕ ಬ್ಯಾಂಕ್​ ಪ್ರತ್ಯೇಕವಾಗಿ ಹೈಕೋರ್ಟ್​ಗೆ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್​.ಆರ್​.ಕೃಷ್ಣ ಕುಮಾರ್​ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ತೆರಿಗೆ ಮಂಡಳಿ ಜಾರಿ ಮಾಡಿದ್ದ ಶೋಕಾಸ್​ ನೋಟಿಸ್​ಗಳನ್ನು ರದ್ದುಪಡಿಸಿ ಆದೇಶಿಸಿದೆ.

ಬ್ಯಾಂಕ್ ಗ್ರಾಹಕರು ತಮ್ಮ ಖಾತೆಗಳಲ್ಲಿ ಕನಿಷ್ಠ ಸರಾಸರಿ ಠೇವಣಿ ಇಡುವುದನ್ನು ಹಣಕಾಸು ಕಾಯಿದೆ 1994ರ ಅಡಿಯಲ್ಲಿ ಬ್ಯಾಂಕಿಂಗ್ ಸೇವೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಬ್ಯಾಂಕುಗಳು ಈ ಸೌಲಭ್ಯಕ್ಕಾಗಿ ಗ್ರಾಹಕರಿಂದ ಯಾವುದೇ ಹೆಚ್ಚುವರಿ ಸೇವಾ ಶುಲ್ಕವನ್ನು ವಸೂಲಿ ಮಾಡುವುದಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರವು ಕಾಲ್ಪನಿಕ ಮೌಲ್ಯವನ್ನು ಸೃಷ್ಟಿಸಿ ಅದಕ್ಕೆ ತೆರಿಗೆ ವಿಧಿಸುವುದು ಕಾನೂನುಬಾಹಿರವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಖಾತೆಯಲ್ಲಿರುವ ಕನಿಷ್ಠ ಸರಾಸರಿ ಠೇವಣಿಯ ಮೇಲೆ ಗ್ರಾಹಕರಿಗೆ ಸಂಪೂರ್ಣ ನಿಯಂತ್ರಣವಿರುತ್ತದೆ ಮತ್ತು ಅವರು ಯಾವಾಗ ಬೇಕಾದರೂ ಆ ಹಣವನ್ನು ಹಿಂಪಡೆಯುವ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ. ಗ್ರಾಹಕರು ಬ್ಯಾಂಕಿನಲ್ಲಿ ಹಣ ಇಟ್ಟಾಗ ಅದಕ್ಕೆ ಬ್ಯಾಂಕ್ ಬಡ್ಡಿ ನೀಡುತ್ತದೆ. ಒಂದು ವೇಳೆ ಕನಿಷ್ಠ ಠೇವಣಿ ನಿಯಮವನ್ನು ಉಲ್ಲಂಘಿಸಿದರೆ ಮಾತ್ರ ದಂಡ ವಿಧಿಸಲಾಗುತ್ತದೆ. ಈ ದಂಡದ ಮೊತ್ತವು ಕೇವಲ ನಿಯಮ ಉಲ್ಲಂಘನೆಗೆ ವಿಧಿಸುವ ಶಿಕ್ಷೆಯ ಸ್ವರೂಪದ್ದಾಗಿದೆಯೇ ಹೊರತು, ಇದನ್ನು ಬ್ಯಾಂಕಿಗೆ ಸಂದಾಯವಾಗುವ ಲಾಭ ಅಥವಾ ಸೇವಾ ತೆರಿಗೆ ವ್ಯಾಪ್ತಿಯಲ್ಲಿ ಬರುವ ಆದಾಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ:

ಗ್ರಾಹಕರು ತಮ್ಮ ಖಾತೆಯಲ್ಲಿ ಕನಿಷ್ಠ ಸರಾಸರಿ ಠೇವಣಿ ಕಾಯ್ದರಿಸಿಕೊಳ್ಳಬೇಕಾಗುವುದು ನಿಯಮವಾಗಿದೆ. ಆದರೆ, ಈ ಮೊತ್ತವನ್ನು ಕಾಯ್ದಿರಿಸಿಕೊಳ್ಳದಿದ್ದಲ್ಲಿ ಅಂತಹ ಗ್ರಾಹಕರಿಗೆ ದಂಡ ವಿಧಿಸುತ್ತಿತ್ತು. ಆದರೆ, ಕನಿಷ್ಠ ಮೊತ್ತ ಕಾಯ್ದಿರಿಸದ ಗ್ರಾಹಕರಿಗೆ ವಿಧಿಸುವ ದಂಡಕ್ಕೆ ಜಿಎಸ್​ಟಿ ಪಾವತಿಸುವಂತೆ ಜಿಎಸ್​ಟಿ ಶೋಕಾಸ್​ ನೋಟಿಸ್​ ಜಾರಿ ಮಾಡಿತ್ತು. ಅಲ್ಲದೆ, ಈ ಕನಿಷ್ಠ ಮೊತ್ತದಿಂದ ಬ್ಯಾಂಕುಗಳಿಗೆ ದ್ರವ್ಯತೆ (ಲಿಕ್ವಿಡಿಟಿ) ಹಾಗೂ ಲಾಭ ಸಿಗುವುದರಿಂದ, ಇದನ್ನು ಒಪ್ಪಂದದ ಲಾಭ ಎಂದು ಪರಿಗಣಿಸಬೇಕು ಎಂದು ವಾದ ಮಂಡಿಸಿತ್ತು.

Share This Article
Facebook Twitter Copy Link Print
Previous Article Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?