Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!
ಪ್ರಮುಖCrimeದೇಶ

Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!

Share
2 Min Read
SHARE

newsics.com | ನ್ಯೂಸಿಕ್ಸ್

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರಿಗೆ ತನಿಖೆಯ ವೇಳೆ ಹಲವು ಸ್ಫೋಟಕ ಮಾಹಿತಿಗಳು ಲಭ್ಯವಾಗಿವೆ. ನಿಶ್ಚಿತಾರ್ಥ ಮುಗಿದು ಮದುವೆಗೆ ಸಿದ್ಧತೆಗಳು ನಡೆಯುತ್ತಿದ್ದ ಬೆನ್ನಲ್ಲೇ, ಭಾವಿ ಪತ್ನಿ ಸಿಯಾ ಗೊಯೆಲ್ ತನ್ನ ಪ್ರಿಯಕರನೊಂದಿಗೆ ಸೇರಿ ಕೇತನ್‌ನನ್ನು ಪುಣೆಯ ಲೋಹಘಡ ಬೆಟ್ಟದ ಮೇಲಿನಿಂದ ತಳ್ಳಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ, ಸಿಯಾ ಗೊಯೆಲ್ ಹಾಗೂ ಚೇತನ್ ಚೌಧರಿ ನಡುವೆ ಪ್ರೀತಿಯಿತ್ತಾದರೂ ಅದು ಅಷ್ಟೊಂದು ಗಾಢವಾಗಿರಲಿಲ್ಲ. ಸಿಯಾ ಸಹೋದರ ಸಾಹಿಲ್ ಗೊಯೆಲ್ ಒಬ್ಬ ಕ್ರಿಕೆಟಿಗನಾಗಿದ್ದು, ಆತ ಆಡುತ್ತಿದ್ದ ತಂಡದಲ್ಲೇ ಚೇತನ್ ಚೌಧರಿ ಕೂಡ ಆಡುತ್ತಿದ್ದನು. ಸಹೋದರನ ಪಂದ್ಯ ವೀಕ್ಷಿಸಲು ಹೋಗುತ್ತಿದ್ದ ಸಿಯಾಗೆ ಚೇತನ್ ಪರಿಚಯವಾಗಿದ್ದನು. ಇವರಿಬ್ಬರ ಪರಿಚಯಕ್ಕೆ ಸಾಹಿಲ್ ಕಾರಣನಾಗಿದ್ದರಿಂದ ಪ್ರಸ್ತುತ ಪೊಲೀಸರು ಸಾಹಿಲ್‌ನನ್ನು ಸಹ ವಿಚಾರಣೆಗೆ ಒಳಪಡಿಸಿದ್ದಾರೆ.

ಮೊದಲಿಗೆ ಕ್ರಿಕೆಟ್ ಮೂಲಕ ಪರಿಚಯವಾಗಿ ಚಾಟಿಂಗ್ ಆರಂಭಿಸಿದ್ದ ಸಿಯಾ, ಆ ಬಳಿಕ ಚೇತನ್‌ನಿಂದ ದೂರವಾಗಿದ್ದಳು. ಆದರೆ, 2025ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೆಳೆಯರೊಬ್ಬರು ಆಯೋಜಿಸಿದ್ದ ಪಾರ್ಟಿಯಲ್ಲಿ ಇವರಿಬ್ಬರು ಮತ್ತೆ ಭೇಟಿಯಾದರು. ಈ ಪಾರ್ಟಿಯ ನಂತರ ಇಬ್ಬರ ನಡುವೆ ಮಾತುಕತೆ ಮತ್ತೆ ಆರಂಭವಾಗಿತ್ತು.

ಕೇತನ್ ಜೊತೆ ಮದುವೆ ಇಷ್ಟವಿಲ್ಲದ ಸಿಯಾ, ಚೇತನ್ ಜೊತೆ ನಿರಂತರ ಸಂಪರ್ಕದಲ್ಲಿದ್ದಳು. ಕೇವಲ ಆರು ತಿಂಗಳ ಅವಧಿಯಲ್ಲಿ (ಜನವರಿಯಿಂದ) ಇವರಿಬ್ಬರು ಬರೋಬ್ಬರಿ 2,004 ಬಾರಿ ಫೋನ್ ಕರೆ ಮಾಡಿ ಮಾತನಾಡಿದ್ದಾರೆ. ಇಬ್ಬರ ಒಟ್ಟು ಮಾತುಕತೆಯ ಅವಧಿ 238 ಗಂಟೆಗಳಾಗಿವೆ ಎಂದು ಮೊಬೈಲ್ ಕರೆ ದಾಖಲೆಗಳಿಂದ (CDR) ತಿಳಿದುಬಂದಿದೆ.

ಜೂನ್ 17 ರಂದು ಪುಣೆಯ ಲುಲ್ಲಾನಗರದಲ್ಲಿರುವ ಕೆಫೆಯೊಂದರಲ್ಲಿ ಸಂಜೆ 4.30 ರಿಂದ 5.30 ರ ಅವಧಿಯಲ್ಲಿ ಸಿಯಾ ಮತ್ತು ಚೇತನ್ ಭೇಟಿಯಾಗಿದ್ದರು. ಈ ಭೇಟಿಯ ವೇಳೆಯಲ್ಲೇ ಕೇತನ್‌ನನ್ನು ಕೊಲ್ಲಲು ಇಬ್ಬರು ಮಾಸ್ಟರ್ ಪ್ಲಾನ್ ಮಾಡಿರಬಹುದು ಎಂದು ಪೊಲೀಸರು ಬಲವಾಗಿ ಶಂಕಿಸಿದ್ದಾರೆ. ಈ ನಿಟ್ಟಿನಲ್ಲಿ ಕೆಫೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ಇಬ್ಬರ ಚರ್ಚೆಯ ಕುರಿತು ತನಿಖೆ ಚುರುಕುಗೊಂಡಿದೆ.

ಇನ್ನು, ಮಗನನ್ನು ಕಳೆದುಕೊಂಡ ಪುಣೆಯ ಉದ್ಯಮಿ ವಿಶಾಲ್ ಅಗರ್ವಾಲ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮಗನ ಅಗಲಿಕೆಯ ನೋವಿನಿಂದಾಗಿ ಅವರು ಸದ್ಯ ಯಾರ ಫೋನ್ ಕರೆಗಳನ್ನೂ ಸ್ವೀಕರಿಸುತ್ತಿಲ್ಲ, ಯಾರೊಂದಿಗೂ ಮಾತನಾಡುತ್ತಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅವರ ಕುಟುಂಬ ಆಗ್ರಹಿಸಿದೆ.

ಇತ್ತ ಆರೋಪಿ ಸಿಯಾ ಗೊಯೆಲ್ ಪೋಷಕರು ಸಹ ಮಗಳ ಕೃತ್ಯಕ್ಕೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ನಮ್ಮ ಮಗಳು ತಪ್ಪು ಮಾಡಿದ್ದರೆ ಆಕೆಯನ್ನು ಗಲ್ಲಿಗೇರಿಸಲಿ, ಇಲ್ಲವೇ ಆಕೆ ಕೇತನ್‌ನನ್ನು ತಳ್ಳಿದ ಅದೇ ಕೋಟೆಯ ಮೇಲಿನಿಂದ ತಳ್ಳಿ ಸಾಯಿಸಲಿ” ಎಂದು ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ.

 

Layoffs ಫೋಕ್ಸ್‌ವ್ಯಾಗನ್ ಕಂಪನಿಯಲ್ಲಿ 1 ಲಕ್ಷ ನೌಕರರ ವಜಾ! 4 ಪ್ರಮುಖ ಕಾರ್ಖಾನೆ ಬಂದ್?

TAGGED:#KetanAgrawal #SiyaGoyal #PuneMurderCase #LohagadFort #CrimeNews #MurderInvestigation #BreakingNews #IndiaNews #WeddingTragedy #ViralNews #CrimeReport #JusticeForKetan #Pune #TrendingNews #KannadaNews
Share This Article
Facebook Twitter Copy Link Print
Previous Article Fatal accident ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, 6‌ ಮಂದಿಗೆ ಗಾಯ
Next Article Bhagyaraj no more ಖ್ಯಾತ ನಿರ್ದೇಶಕ ಭಾಗ್ಯರಾಜ್ ಇನ್ನಿಲ್ಲ

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?