newsics.com| ನ್ಯೂಸಿಕ್ಸ್
ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಹಾಗೂ ಖ್ಯಾತ ಚಿತ್ರಕಥೆಗಾರ ಕೆ. ಭಾಗ್ಯರಾಜ್ ಇಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಮಧ್ಯಮ ವರ್ಗದ ಕೌಟುಂಬಿಕ ಕಥೆಗಳಿಗೆ ಹೆಸರಾಗಿದ್ದ ಅವರು, ‘ಮುಂದಾನೈ ಮುಡಿಚ್ಚು’ ಅಂತಹ ಅನೇಕ ಅದ್ಭುತ ಚಿತ್ರಗಳನ್ನು ನೀಡಿದ್ದಾರೆ. ಇವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ಭಾಗ್ಯರಾಜ್ ಅವರ ಪತ್ನಿ ಪೂರ್ಣಿಮಾ ಹಾಗೂ ಮಕ್ಕಳು ಶಂತನು, ಶರಣ್ಯ. ಇವರ ಪತ್ನಿ ಮಾಜಿ ನಟಿ ಹಾಗೂ ಮಗ ಶಂತನು ಭಾಗ್ಯರಾಜ್ ಕೂಡ ಚಿತ್ರರಂಗದಲ್ಲಿ ನಟನಾಗಿದ್ದಾರೆ.
ಇವರು ಕೆಲವು ದಿನಗಳ ಹಿಂದೆ ಗೋವಾದಲ್ಲಿ ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಮಗಳ ಮದುವೆ ಸಮಾರಂಭದಲ್ಲಿ ಕೂಡ ಭಾಗವಹಿಸಿದ್ದರು.
ಇವರ ಪೂರ್ಣ ಹೆಸರು ಕೃಷ್ಣಸ್ವಾಮಿ ಭಾಗ್ಯರಾಜ್. ಅವರು ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಜನಿಸಿದ್ದು, ಆರಂಭದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಪ್ರಖ್ಯಾತ ನಿರ್ದೇಶಕ ಭಾರತೀರಾಜ ಅವರ ಬಳಿ ಸಿನಿಮಾ ಕಲೆ ಕಲಿತಿದ್ದರು. ನಂತರ ಅವರು ಸ್ವತಂತ್ರ ನಿರ್ದೇಶಕರಾಗಿ ದೊಡ್ಡ ಯಶಸ್ಸು ಕಂಡರು. ತಮಿಳು ಚಿತ್ರರಂಗದಲ್ಲಿ ಅವರು ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿದ್ದರು.
ಭಾಗ್ಯರಾಜ್ ಅವರು ತಮ್ಮ ವೃತ್ತಿಜೀವನದಲ್ಲಿ 25 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹಾಗೆಯೇ ಅವರು 75 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅವರ ‘ಮುಂದಾನೈ ಮುಡಿಚ್ಚು’ ಸಿನಿಮಾ ದೊಡ್ಡ ಹಿಟ್ ಆಗಿದ್ದು, ಅದರೊಂದಿಗೆ ‘ಅಂದ 7 ನಾಟ್ಕಳ್’ ಮತ್ತು ‘ಡಾರ್ಲಿಂಗ್ ಡಾರ್ಲಿಂಗ್ ಡಾರ್ಲಿಂಗ್’ ಚಿತ್ರಗಳು ಕ್ಲಾಸಿಕ್ ಎನಿಸಿಕೊಂಡಿವೆ.
ಭಾಗ್ಯರಾಜ್ ಅವರು ಕನ್ನಡದಲ್ಲೂ ನಟನೆ ಮಾಡಿದ್ದಾರೆ. 2015ರಲ್ಲಿ ಬಿಡುಗಡೆಗೊಂಡ ‘ರೆಡ್ ಅಲರ್ಟ್’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು ಹಾಗೂ 2025ರಲ್ಲಿ ಬಂದ ‘ಕುಬೇರ’ ಅವರ ನಟನೆಯ ಕೊನೆಯ ಸಿನಿಮಾ.
Fatal accident ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, 6 ಮಂದಿಗೆ ಗಾಯ