Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bus Tragedy ಚಲಿಸುವ ಬಸ್‌ನಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ವಿದ್ಯಾರ್ಥಿ: ಟಿಪ್ಪರ್ ಡಿಕ್ಕಿಯಾಗಿ ರುಂಡವೇ ಕಟ್!
ಪ್ರಮುಖCrimeಕರ್ನಾಟಕ

Bus Tragedy ಚಲಿಸುವ ಬಸ್‌ನಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ವಿದ್ಯಾರ್ಥಿ: ಟಿಪ್ಪರ್ ಡಿಕ್ಕಿಯಾಗಿ ರುಂಡವೇ ಕಟ್!

Share
2 Min Read
SHARE

newsics.com | ನ್ಯೂಸಿಕ್ಸ್

Contents
ತನಿಖೆ ಆರಂಭಿಸಿದ ಪೊಲೀಸರುಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ವಿನಂತಿ

ಧಾರವಾಡ: ಚಲಿಸುತ್ತಿದ್ದ ಬಸ್‌ನ ಕಿಟಕಿಯಿಂದ ಹೊರಗೆ ತಲೆ ಹಾಕಿದ್ದ ಐಟಿಐ ವಿದ್ಯಾರ್ಥಿಯೊಬ್ಬನಿಗೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿದ್ದು, ತಲೆಯ ರುಂಡವೇ ಕತ್ತರಿಸಿ ರಸ್ತೆಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯಕುಂದಗೋಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಈ ಭೀಕರ ದುರಂತದಲ್ಲಿ ಕುಂದಗೋಳ ತಾಲ್ಲೂಕಿನ ಶಿರೂರು ಗ್ರಾಮದ ನಿವಾಸಿಯಾದ ಹದಿನೇಳು ವರ್ಷದ ಪಕ್ಕಿರೇಶ್ ಎಂಬ ಯುವಕ ಸ್ಥಳದಲ್ಲೇ ಜೀವಬಿಟ್ಟಿದ್ದಾನೆ. ಮೃತ ಯುವಕ ಹುಬ್ಬಳ್ಳಿಯಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದನು. ಎಂದಿನಂತೆ ಕಾಲೇಜು ಮುಗಿಸಿ ತನ್ನ ಗ್ರಾಮಕ್ಕೆ ಮರಳಲು ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್ ಹತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಪಕ್ಕಿರೇಶ್ ಬಸ್ಸಿನ ಹಿಂಬದಿಯ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದನು. ಬಸ್ ಕುಂದಗೋಳ ಪಟ್ಟಣದ ಹೊರವಲಯದ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಗುಟ್ಕಾ ಉಗುಳುವ ಉದ್ದೇಶದಿಂದ ಆತ ತನ್ನ ತಲೆಯನ್ನು ಕಿಟಕಿಯಿಂದ ಹೊರಗೆ ಹಾಕಿದ್ದಾನೆ. ದುರದೃಷ್ಟವಶಾತ್, ಇದೇ ಸಂದರ್ಭದಲ್ಲಿ ಬಸ್ಸಿನ ಹಿಂಬದಿಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಕಿಟಕಿಯ ಹೊರಗಿದ್ದ ಪಕ್ಕಿರೇಶ್‌ನ ತಲೆಗೆ ಬಲವಾಗಿ ಗುದ್ದಿ ಯುವಕನ ತಲೆ ದೇಹದಿಂದ ಸಂಪೂರ್ಣವಾಗಿ ಬೇರ್ಪಟ್ಟು ರಸ್ತೆಗೆ ಬಿದ್ದಿತ್ತು. ಇತ್ತ ತಲೆ ಇಲ್ಲದ ದೇಹವು ಬಸ್ಸಿನ ಕಿಟಕಿಯ ಸೀಟಿನಲ್ಲೇ ನೇತಾಡುತ್ತಿತ್ತು.

ತನಿಖೆ ಆರಂಭಿಸಿದ ಪೊಲೀಸರು

ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಕುಂದಗೋಳ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಹಾಗೂ ಕತ್ತರಿಸಿದ ತಲೆಯನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಟಿಪ್ಪರ್ ಚಾಲಕನ ವಿರುದ್ಧ ಪೊಲೀಸರು ಗಂಭೀರ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ವಿನಂತಿ

ಪ್ರಯಾಣದ ಅವಧಿಯಲ್ಲಿ ಕಿಟಕಿಯಿಂದ ದೇಹದ ಯಾವುದೇ ಭಾಗವನ್ನು ಹೊರಚಾಚುವುದು ನೇರವಾಗಿ ಮೃತ್ಯುವನ್ನು ಆಹ್ವಾನಿಸಿದಂತೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಈ ಒಂದು ಕ್ಷಣದ ಅಜಾಗರೂಕತೆ ಇಡೀ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸುತ್ತದೆ. ಬಡ ಕುಟುಂಬದ ಆಧಾರಸ್ತಂಭವಾಗಬೇಕಿದ್ದ ಯುವಕನ ಈ ಕ್ರೂರ ಸಾವಿನಿಂದಾಗಿ ಶಿರೂರು ಗ್ರಾಮದಲ್ಲಿ ಸದ್ಯ ಶೋಕದ ವಾತಾವರಣ ನಿರ್ಮಾಣವಾಗಿದೆ.

 

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

TAGGED:#Buss #Accident #tipper lorry #student dead #dharwad #head
Share This Article
Facebook Twitter Copy Link Print
Previous Article Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!
Next Article Crime Case ತ್ರಿವಳಿ ಕೊ*ಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಶವ ಸುಡಲು ಡ್ರಮ್‌ ರೆಡಿ ಮಾಡಿದ್ದ ಹಂತಕರು! ಮರ್ಡರ್ ಕೇಸ್‌ನಲ್ಲಿ ಬಯಲಾಯ್ತು ಅಸಲಿ ಸ್ಕೆಚ್

Popular Posts

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read

You Might Also Like

ದೇಶಪ್ರಮುಖವಿದೇಶವೈರಲ್

Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

3 Min Read
ಕರ್ನಾಟಕಪ್ರಮುಖ

Karnataka government| ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇಮಕ

1 Min Read
ಕರ್ನಾಟಕದೇಶಪ್ರಮುಖ

Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

2 Min Read
ಕರ್ನಾಟಕಪ್ರಮುಖ

High court styas 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?