Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Terrorist ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ‌ ನಾಲ್ವರ ಬಂಧನ – ವಿದೇಶಿ ಪಿಸ್ತೂಲ್, ಜೀವಂತ ಗುಂಡುಗಳು ವಶಕ್ಕೆ
Crimeದೇಶಪ್ರಮುಖ

Terrorist ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ‌ ನಾಲ್ವರ ಬಂಧನ – ವಿದೇಶಿ ಪಿಸ್ತೂಲ್, ಜೀವಂತ ಗುಂಡುಗಳು ವಶಕ್ಕೆ

Share
1 Min Read
SHARE

newsics.com| ನ್ಯೂಸಿಕ್ಸ್

ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲಿತ ಜಾಲವನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಭೇದಿಸಿದ್ದು, ಪ್ರಕಾರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶುಭದೀಪ್ ಸಿಂಗ್, ಗುರ್ಜಂತ್ ಸಿಂಗ್, ಸಜನ್ ಸಿಂಗ್ ಹಾಗೂ ಗಗನ್‌ಪ್ರೀತ್ ಎಂದು ಗುರುತಿಸಲಾಗಿದೆ. ಇವರಲ್ಲಿ ಮೂವರು ಪಂಜಾಬ್ ಮೂಲದವರು ಹಾಗೂ ಓರ್ವನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರು ಐಎಸ್‌ಐ ಹ್ಯಾಂಡ್ಲರ್ ಶಹಜಾದ್ ಭಟ್ ಹಾಗೂ ಆತನ ಸಹಚರರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಗುರುತು ಪತ್ತೆಯಾಗದಂತೆ ನೋಡಿಕೊಳ್ಳಲು ಪಾಕಿಸ್ತಾನದಲ್ಲಿದ್ದ ಹ್ಯಾಂಡ್ಲರ್‌ಗಳು ಒದಗಿಸಿದ್ದ ವಿದೇಶಿ ಮೊಬೈಲ್ ಸಂಖ್ಯೆಗಳ ಮೂಲಕವೇ ಪರಸ್ಪರ ಸಂಪರ್ಕದಲ್ಲಿದ್ದು, ಸೂಚನೆಗಳನ್ನು ಪಡೆದುಕೊಳ್ಳುತ್ತಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಆರೋಪಿಗಳು ದೆಹಲಿ–ಎನ್‌ಸಿಆರ್‌ನ ಪ್ರಮುಖ ಸಾರ್ವಜನಿಕ ಸ್ಥಳಗಳು ಮತ್ತು ಜನಸಂದಣಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಉಗ್ರ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹಲವು ದಿನಗಳಿಂದ ಗುಪ್ತಚರ ಮಾಹಿತಿ ಸಂಗ್ರಹಿಸಿ ವಿಶೇಷ ಕಾರ್ಯಾಚರಣೆ ನಡೆಸಿದ ಬಳಿಕ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರಿಂದ ವಿದೇಶಿ ಪಿಸ್ತೂಲ್, ಜೀವಂತ ಗುಂಡುಗಳು, ಮೊಬೈಲ್ ಫೋನ್‌ಗಳು, ಡಿಜಿಟಲ್ ಸಾಧನಗಳು ಹಾಗೂ ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಫೊರೆನ್ಸಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿಗಳ ಮೂಲಕ ದೇಶದೊಳಗೆ ಕಾರ್ಯನಿರ್ವಹಿಸುತ್ತಿರುವ ಇತರ ಐಎಸ್‌ಐ ಜಾಲಗಳ ಸಂಪರ್ಕ ಹಾಗೂ ಸಹಚರರ ಬಗ್ಗೆ ಮಾಹಿತಿ ಕಲೆಹಾಕುವ ಕಾರ್ಯ ಮುಂದುವರಿದಿದೆ.

ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಕೇಂದ್ರ ಗುಪ್ತಚರ ಸಂಸ್ಥೆಗಳ ಸಹಯೋಗದೊಂದಿಗೆ ಮುಂದುವರಿಸಿದ್ದು, ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

Share This Article
Facebook Twitter Copy Link Print
Previous Article Crime Case ವಿದೇಶಕ್ಕೆ ಹೋಗಿದ್ದ ಯುವತಿ ಉಗಾಂಡದಲ್ಲಿ ಆತ್ಮಹ*ತ್ಯೆ; ತಾಯ್ನಾಡಿಗೆ ಬರಲಿದೆ ಮೃತದೇಹ!
Next Article Rainy season ಮಳೆಗಾಲದಲ್ಲಿ ಕಾರ್‌ ಡ್ರೈವಿಂಗ್‌ ಮಾಡೋವಾಗ ಆಲೂಗಡ್ಡೆ ಇಟ್ಕೊಂಡಿರಿ: ಯಾಕೆ ಗೊತ್ತಾ? ಇಲ್ಲಿದೆ ನೋಡಿ

Popular Posts

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read

You Might Also Like

ದೇಶಪ್ರಮುಖವಿದೇಶವೈರಲ್

Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

3 Min Read
ಕರ್ನಾಟಕದೇಶಪ್ರಮುಖ

Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

2 Min Read
filmದೇಶಪ್ರಮುಖ

Actress Devig ಖ್ಯಾತ ಹಾಲಿವುಡ್ ನಟಿ ಏಡ್ಸ್‌ಗೆ‌ ಬಲಿ!

2 Min Read
ದೇಶಪ್ರಮುಖರಿಲೇಷನ್‌ಶಿಪ್ವೈರಲ್

Insta Love Story: 3 ವರ್ಷ ಲವ್ ಮಾಡಿ ಮದುವೆ, ಫಸ್ಟ್​ ನೈಟ್ ಮುನ್ನ ಗೊತ್ತಾಯ್ತು ಅವಳಲ್ಲ ಅವನು’!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?