Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Chikkamagaluru ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ, ಯುವಕ ಪೊಲೀಸ್ ವಶಕ್ಕೆ
ಕರ್ನಾಟಕಪ್ರಮುಖ

Chikkamagaluru ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ, ಯುವಕ ಪೊಲೀಸ್ ವಶಕ್ಕೆ

Share
2 Min Read
SHARE

newsics.com| ನ್ಯೂಸಿಕ್ಸ್

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಧಾಳಿ ನಡೆಸಿರುವ ಘಟನೆ ಚಿಕ್ಕಮಂಗಳೂರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಈ ಘಟನೆಯನ್ನು ಕಂಡು ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಮೂಲದ ಪುನೀತ್ ಎಂಬುವವನೇ ಈ ಕೃತ್ಯ ಎಸಗಿದ ಆರೋಪಿ. ಚಿಕ್ಕಮಗಳೂರಿನ ಹಾಸ್ಟೆಲ್‌ನಲ್ಲಿದ್ದುಕೊಂಡು ಓದುತ್ತಿದ್ದ ಕಡೂರು ಮೂಲದ ಬಾಲಕಿಯನ್ನು ಈತ ಕಳೆದ ಕೆಲವು ಸಮಯದಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಅಪ್ರಾಪ್ತೆ ಈತನ ಕಿರುಕುಳಕ್ಕೆ ಬೇಸತ್ತು ಹೋಗಿದ್ದಳು. ಈತನ ಕಾಟ ಹೆಚ್ಚಾದ ಕಾರಣ ಬಾಲಕಿ ಹಾಸ್ಟೆಲ್‌ನಿಂದ ಹೊರಬರುವುದನ್ನು ನಿಲ್ಲಿಸಿದ್ದಳು. ಆದರೂ ಬಿಡದ ಆರೋಪಿ, ಪ್ರತಿದಿನ ಹಾಸ್ಟೆಲ್ ಬಳಿ ಬಂದು ಕಿರಿಕ್ ಮಾಡುತ್ತಿದ್ದ. ಇದರಿಂದ ಹಾಸ್ಟೆಲ್ ವಾರ್ಡನ್ ಬಾಲಕಿಗೆ ಎಚ್ಚರಿಕೆ ನೀಡಿದ್ದರು.

ಕುಟುಂಬಸ್ಥರಿಗೂ ಬೆದರಿಕೆ:

ಹುಚ್ಚು ಪ್ರೇಮಿಯ ಕಾಟ ತಾಳಲಾರದೆ ಬಾಲಕಿ ಕೆಲವು ದಿನಗಳ ಕಾಲ ತನ್ನ ಊರಿಗೆ ತೆರಳಿದ್ದಳು. ಅಷ್ಟಕ್ಕೂ ಸುಮ್ಮನಾಗದ ಆರೋಪಿ ಪುನೀತ್, ಬಾಲಕಿಯ ಪೋಷಕರ ಮೊಬೈಲ್ ಸಂಖ್ಯೆ ಪಡೆದುಕೊಂಡು ಅವರಿಗೂ ಕರೆ ಮಾಡಿ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ.. ಇದರಿಂದಾಗಿ ಬಾಲಕಿಯ ಕುಟುಂಬಸ್ಥರು ತೀವ್ರ ಆತಂಕಕ್ಕೆ ಒಳಾಗಿದ್ದರು.

ಕ್ರೀಡಾಂಗಣದಲ್ಲಿ ಭೀಕರ ಹಲ್ಲೆ:

ಚಿಕ್ಕಮಗಳೂರು ನಗರದ ಜಿಲ್ಲಾಧಿಕಾರಿ (DC) ಹಾಗೂ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಬಳಿಯೇ ಇರುವ ಜಿಲ್ಲಾ ಕ್ರೀಡಾಂಗಣದಲ್ಲಿ ಬಾಲಕಿ ಸಿಕ್ಕಾಗ, ಆರೋಪಿ ಅಲ್ಲಿಯೂ ತನ್ನನ್ನು ಪ್ರೀತಿಸುವಂತೆ ಧಮ್ಕಿ ಹಾಕಿದ್ದಾನೆ. ಬಾಲಕಿ ಎಂದಿನಂತೆ ನಿರಾಕರಿಸಿದಾಗ ಕುಪಿತಗೊಂಡ ಪುನೀತ್, ಏಕಾಏಕಿ ಆಕೆಯ ಮೇಲೆ ಎರಗಿ ಮನಬಂದಂತೆ ಥಳಿಸಿದ್ದಾನೆ. ಅಷ್ಟೇ ಅಲ್ಲದೆ, ಅಸಹಾಯಕ ಬಾಲಕಿಯನ್ನು ಕೆಳಗೆ ಕೆಡವಿ ಕಾಲಿನಿಂದ ಕ್ರೂರವಾಗಿ ತುಳಿದಿದ್ದಾನೆ ಎನ್ನಲಾಗಿದೆ. ಈ ಅನಿರೀಕ್ಷಿತ ದಾಳಿಯಿಂದ ಬಾಲಕಿ ಭಯಭೀತಳಾಗಿ ಕಿರುಚಾಡಿದ್ದಾಳೆ.

ಬಾಲಕಿಯ ಕಿರುಚಾಟ ಹಾಗೂ ಹಲ್ಲೆ ನಡೆಸುವುದನ್ನು ಕಂಡ ಸುತ್ತಮುತ್ತಲಿನ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಓಡಿ ಬಂದಿದ್ದಾರೆ. ಜನ ಸೇರುವುದನ್ನು ಗಮನಿಸಿದ ಆರೋಪಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಸ್ಥಳೀಯರು ಆತನನ್ನು ಬಿಡದೆ ಬೆನ್ನಟ್ಟಿ, ಎಸ್‌ಪಿ ನಿವಾಸದ ಮುಂಭಾಗದಲ್ಲೇ ಹಿಡಿದು ಮಹಿಳಾ ಪೊಲೀಸ್ ವಿಭಾಗಕ್ಕೆ ಕರೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

Share This Article
Facebook Twitter Copy Link Print
Previous Article Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ
Next Article Vaibhav ಮ್ಯಾಂಚೆಸ್ಟರ್‌ನಲ್ಲಿ ವೈಭವ್ ಸೂರ್ಯವಂಶಿ ಪದಾರ್ಪಣೆ: ಸಚಿನ್ ದಾಖಲೆ ಅಳಿಸಿದ ಬಾಲಕ!

Popular Posts

Udupi 70 ಲಕ್ಷ ರೂ. ಪಡೆದು ಉದ್ಯಮಿಗೆ ವಂಚನೆ : ಮುಸ್ಲಿಂ ಮಹಿಳೆಯ ಬಂಧನ

1 Min Read

Dubai ಬುರ್ಜ್ ಖಲೀಫಾದಲ್ಲಿ AI ಕಂಪನಿ ಸ್ಥಾಪಸಿದ 14 ವರ್ಷದ ಹುಡುಗ

2 Min Read

E20 ಪೆಟ್ರೋಲ್ ಬಳಸಿದರೆ ವಾಹನದ ಮೈಲೇಜ್ ಕಡಿಮೆಯಾಗುತ್ತಾ? ಸರ್ಕಾರ ಹೇಳಿದ್ದೇನು

2 Min Read

Actress Rambha ನಡೆದಾಡಲೂ ಕಷ್ಟಪಡ್ತಿರೋ ರವಿಚಂದ್ರನ್ ಸಿನಿಮಾ ನಾಯಕಿ! ಏನಾಯ್ತು ರಂಭಾಗೆ? ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

2 Min Read
Crimeದೇಶಪ್ರಮುಖ

SHOCKING : ಮಹಿಳೆಯನ್ನು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಕುಟುಂಬ ಸದಸ್ಯರು

1 Min Read
Crimeದೇಶಪ್ರಮುಖ

Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ

2 Min Read
ಕರ್ನಾಟಕದೇಶಪ್ರಮುಖ

Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?