newsics.com | ನ್ಯೂಸಿಕ್ಸ್
ಸಕಲೇಶಪುರ: ಟೀ ಕುಡಿಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಕಂಟೇನರ್ ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಾಳ್ಳುಪೇಟೆಯಲ್ಲಿ ಶುಕ್ರವಾರ ನಡೆದಿದೆ.
ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನೆಟ್ಪುರ ಗ್ರಾಮದ ಗಣೇಶಪುರ ನಿವಾಸಿ, ಅಮರ್ ಸಿಂಗ್ ಪೈ (50) ಮೃತ ಚಾಲಕ ಎಂದು ಗುರುತಿಸಲಾಗಿದೆ.
ಅಮರ್ ಸಿಂಗ್ ಪೈ ಅವರು ಕಂಟೇನರ್ನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಬಾಳ್ಳುಪೇಟೆಯಲ್ಲಿ ವಾಹನ ನಿಲ್ಲಿಸಿ, ಕ್ಯಾಂಟೀನ್ ಮುಂದೆ ಕುಳಿತು ಟೀ ಕುಡಿಯುತ್ತಿದ್ದರು. ಇದೇ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಮರ್ ಸಿಂಗ್ ಪೈ ಕುಸಿದು ಬೀಳುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.
ASTRO ಇಂದು ಶನಿವಾರ ಪ್ರೀತಿ ಯೋಗ, ಆಯುಷ್ಮಾನ್ ಯೋಗ: ಈ ಐದು ರಾಶಿಗಳ ಜನ ಅದೃಷ್ಟವಂತರು