newsics.com| ನ್ಯೂಸಿಕ್ಸ್
ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ಸಲ್ಲಿಸಿದ್ದ ರಾಜೀನಾಮೆಯನ್ನು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಂಗೀಕರಿಸಿದೆ. ಶೀಘ್ರದಲ್ಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗುವುದು ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ.
ಚಂಪತ್ ರಾಯ್ ಅವರಿಂದ ತೆರವಾದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ. ಬಜರಂಗ್ ಬಾಗ್ರಾ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ತಿಳಿಸಿವೆ . ದೇಣಿಗೆ ವಿವಾದಕ್ಕೆ ಸಂಬಂಧಿಸಿದಂತೆ ಚಂಪತ್ ರಾಯ್ ರಾಜೀನಾಮೆ ನೀಡಿದ್ದರು.
ಬಜರಂಗ್ ಬಾಗ್ರಾ ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಚಾರ್ಟರ್ಡ್ ಅಕೌಂಟೆಂಟ್ ಮತ್ತು ಪಿಎಸ್ಯು ನಲ್ಕೊದ ಮಾಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಟ್ರಸ್ಟ್ನ ಕಾರ್ಯನಿರ್ವಹಣೆಯನ್ನು ವೃತ್ತಿಪರಗೊಳಿಸಲು ಸಹಾಯ ಮಾಡುವ ಆಡಳಿತಾತ್ಮಕ ಮತ್ತು ಆರ್ಥಿಕ ಪರಿಣತಿಯನ್ನು ಹೊಂದಿರುವ ವ್ಯಕ್ತಿ ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.
ಮೂಲಗಳ ಪ್ರಕಾರ, ಟ್ರಸ್ಟ್ ರಾಮ ಮಂದಿರದ ಆಡಳಿತ, ಹಣಕಾಸು ಮತ್ತು ಸಾಂಸ್ಥಿಕ ಆಡಳಿತದ ಬಗ್ಗೆ ಬಲವಾದ ಹಿಡಿತ ಹೊಂದಿರುವ ವ್ಯಕ್ತಿಯನ್ನು, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಿಸುವ ಉದ್ದೇಶ ಹೊಂದಿದೆ. ಅಲ್ಲದೇ ಚಂಪತ್ ರಾಯ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದರೂ, ಅವರು ಟ್ರಸ್ಟ್ನ ಸದಸ್ಯರಾಗಿ ಮುಂದುವರೆಯಲು ಸಭೆ ಅವಕಾಶ ಕಲ್ಪಿಸಿದೆ.
ಹೊಸ ಪ್ರಧಾನ ಕಾರ್ಯದರ್ಶಿಯ ಕುರಿತು ಅಂತಿಮ ನಿರ್ಧಾರವನ್ನು ತಕ್ಷಣವೇ ಘೋಷಿಸದಿರಬಹುದು. ವಿಎಚ್ಪಿಯ ದ್ವೈವಾರ್ಷಿಕ ರಾಷ್ಟ್ರೀಯ ಕಾರ್ಯಕಾರಿ ಸಭೆ ಜುಲೈ 19-20 ರಂದು ದೆಹಲಿಯಲ್ಲಿ ನಡೆಯಲಿದ್ದು, ಅಲ್ಲಿ ಜವಾಬ್ದಾರಿ ವರ್ಗಾವಣೆ ಸೇರಿದಂತೆ ಪ್ರಮುಖ ಸಾಂಸ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
Girl murder ನಾಪತ್ತೆಯಾಗಿದ್ದ 12 ವರ್ಷದ ಬಾಲಕಿ ಶವ ಪತ್ತೆ; ಶಂಕಿತ ಆರೋಪಿಯನ್ನು ಹೊಡೆದು ಕೊಂದ ಸ್ಥಳೀಯರು