Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

Share
2 Min Read
SHARE

newsics.com | ನ್ಯೂಸಿಕ್ಸ್

ಕೇವಲ ಲೈಕ್ಸ್ ಮತ್ತು ವೀವ್ಸ್‌ಗಾಗಿ ರೀಲ್ಸ್‌ ಮಾಡುವ ಇಂದಿನ ಯುವಜನತೆ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಪ್ರಕೃತಿ ಸೌಂದರ್ಯದ ನಾಡು ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಭೇಟಿ ನೀಡಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು, ಅಲ್ಲಿನ ಅಪಾಯದ ಮುನ್ನೆಚ್ಚರಿಕೆಗಳನ್ನು ಗಾಳಿಗೆ ತೂರಿ ‘ರೀಲ್ಸ್’ ವಿಡಿಯೋ ಮಾಡುವ ಹುಚ್ಚಾಟಕ್ಕೆ ಇಳಿದಿದ್ದಾರೆ.

ನಿಷೇಧಿತ ವಲಯದ ಜಾರುಬಂಡೆಗಳ ಮೇಲೆ ನಿಂತು ಪೋಸ್ ನೀಡುತ್ತಿದ್ದಾಗ ದಿಢೀರನೆ ನೀರಿನ ಮಟ್ಟ ಹೆಚ್ಚಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಜಲಪಾತದ ಭೋರ್ಗರೆಯುವ ನೀರಿನ ಮಧ್ಯೆ ಸಿಲುಕಿ ಪ್ರಾಣಭಯ ಅನುಭವಿಸಿದ ಘಟನೆ ಇಡೀ ರಾಜ್ಯ ಬೆಚ್ಚಿಬೀಳುವಂತೆ ಮಾಡಿದೆ.

ಎಚ್ಚರಿಕೆ ಫಲಕ, ಬ್ಯಾರಿಕೇಡ್ ದಾಟಿ ಪುಂಡಾಟ

ಮೂಲಗಳ ಪ್ರಕಾರ, ಬೆಂಗಳೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಗುಂಪೊಂದು ಕೊಡಗು ಪ್ರವಾಸಕ್ಕೆ ಬಂದಿತ್ತು. ಮಲ್ಲಳ್ಳಿ ಜಲಪಾತದ ಬಳಿ ತೆರಳಿದ್ದ ಈ ವಿದ್ಯಾರ್ಥಿಗಳು, ಅಲ್ಲಿ ಅಳವಡಿಸಲಾಗಿದ್ದ ಅಪಾಯದ ಮುನ್ನೆಚ್ಚರಿಕೆ ಫಲಕಗಳನ್ನು ಹಾಗೂ ಸುರಕ್ಷತಾ ಬ್ಯಾರಿಕೇಡ್‌ಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ನಿಷೇಧಿತ ವಲಯಕ್ಕೆ ಇಳಿದಿದ್ದಾರೆ. ಜಲಪಾತದ ಭೋರ್ಗರೆಯುವ ನೀರಿನ ಪಕ್ಕದಲ್ಲಿರುವ ಜಾರು ಬಂಡೆಗಳ ಮೇಲೆ ನಿಂತು ಸೋಶಿಯಲ್ ಮೀಡಿಯಾ ರೀಲ್ಸ್‌ಗಾಗಿ ಪೋಸ್ ಕೊಡಲು ಆರಂಭಿಸಿದ್ದಾರೆ.

ಕ್ಷಣಾರ್ಧದಲ್ಲಿ ಹೆಚ್ಚಿದ ನೀರಿನ ಮಟ್ಟ

ವಿದ್ಯಾರ್ಥಿಗಳು ವಿಡಿಯೋ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲೇ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾಗೂ ಮೇಲ್ಭಾಗದ ಚೆಕ್ ಡ್ಯಾಂನಿಂದ ಕುಮಾರಧಾರ ನದಿಗೆ ದಿಢೀರನೆ ನೀರು ಬಿಟ್ಟಿದ್ದರಿಂದ ಜಲಪಾತದಲ್ಲಿ ನೀರಿನ ಹರಿವು ಕ್ಷಣಾರ್ಧದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಈ ವೇಳೆ ಮೂಲತಃ ಆಂಧ್ರಪ್ರದೇಶದವರಾಗಿದ್ದು, ಬೆಂಗಳೂರಿನಲ್ಲಿ ಓದುತ್ತಿದ್ದ ಸಂತೋಷ್ ಮತ್ತು ಗಣೇಶ್ ಎಂಬ ಇಬ್ಬರು ವಿದ್ಯಾರ್ಥಿಗಳು ನೀರಿನ ರಭಸಕ್ಕೆ ಸಿಲುಕಿ, ನದಿಯ ಮಧ್ಯಭಾಗದ ಬಂಡೆಯೊಂದರ ಮೇಲೆ ಆಸರೆ ಪಡೆದು ಪ್ರಾಣಭಯದಿಂದ ಕೂಗಾಡುತ್ತಿದ್ದರು. ಇದನ್ನು ಕಂಡು ದಡದಲ್ಲಿದ್ದ ಅವರ ಸ್ನೇಹಿತರು ಅಸಹಾಯಕರಾಗಿ ಕಿರುಚಾಡಲಾರಂಭಿಸಿದ್ದಾರೆ.

ದಡದಲ್ಲಿದ್ದ ಸಹಪಾಠಿಗಳು ಕೂಡಲೇ ಸ್ಥಳೀಯ ಗ್ರಾಮಸ್ಥರಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸೋಮವಾರಪೇಟೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಯುವಕರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಭೋರ್ಗರೆಯುವ ನೀರಿನ ಮಧ್ಯೆಯೂ ಹರಸಾಹಸ ಪಟ್ಟು ಕೊನೆಗೂ ಇಬ್ಬರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಇಬ್ಬರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Photo op turns risky! Two engineering students from #AndhraPradesh were rescued after getting stranded on a rock at Mallalli Falls in #Kodagu while taking selfies. Rising water levels caught them off guard. Fire & Emergency Services carried out the rescue. #Karnataka pic.twitter.com/nf5kBvRgW2

— Imran Khan (@KeypadGuerilla) July 7, 2026

Telangana ವಿಡಿಯೋ ಕಾಲ್‌ನಲ್ಲಿ ಪತ್ನಿಗೆ ಸಾವು ತೋರಿಸಿದ ಪತಿ

https://www.newsics.com/2026/07/07/i-will-never-forget-those-two-incidents-in-my-life-actress-radha-bhagavathi-opens-up-about-bitter-experiences/

Share This Article
Facebook Twitter Copy Link Print
Previous Article Water bottle ನೀತಾ ಅಂಬಾನಿಯ ಈ ವಾಟರ್ ಬಾಟಲ್ ಬೆಲೆ ಎಷ್ಟು?
Next Article Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

Popular Posts

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read

You Might Also Like

ದೇಶಪ್ರಮುಖವೈರಲ್

Water bottle ನೀತಾ ಅಂಬಾನಿಯ ಈ ವಾಟರ್ ಬಾಟಲ್ ಬೆಲೆ ಎಷ್ಟು?

1 Min Read
filmಕರ್ನಾಟಕಪ್ರಮುಖ

Actress Radha ನೀನು ಬಟ್ಟೆ ಬಿಚ್ಚಿ ನಟಿಸಿದ್ರೆ ಮಾತ್ರ ಬೆಳಿತೀಯಾ… ನಟಿ ರಾಧಾ ಭಗವತಿಗೆ ಹೀಗೊಂದು ಸಲಹೆ ಕೊಟ್ಟ ಭೂಪ!

3 Min Read
ಕರ್ನಾಟಕದೇಶ

Mysore dasara ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ನಡೆದ ಇಸಿಜಿ ಪರೀಕ್ಷೆ

1 Min Read
ದೇಶಪ್ರಮುಖ

Telangana ವಿಡಿಯೋ ಕಾಲ್‌ನಲ್ಲಿ ಪತ್ನಿಗೆ ಸಾವು ತೋರಿಸಿದ ಪತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?