Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kollywood ಜುಲೈ 23ರಂದು ವಿಶ್ವದಾದ್ಯಂತ ‘ಜನನಾಯಗನ್’ ಗ್ರ್ಯಾಂಡ್‌ ರಿಲೀಸ್
ಪ್ರಮುಖದೇಶಮನರಂಜನೆ

Kollywood ಜುಲೈ 23ರಂದು ವಿಶ್ವದಾದ್ಯಂತ ‘ಜನನಾಯಗನ್’ ಗ್ರ್ಯಾಂಡ್‌ ರಿಲೀಸ್

Share
2 Min Read
SHARE

newsics.com | ನ್ಯೂಸಿಕ್ಸ್

Contents
ರಾಜಕೀಯ ಪ್ರವೇಶದ ಬೆನ್ನಲ್ಲೇ ಕೊನೆಯ ಸಿನಿಮಾಟಿಕೆಟ್ ದರ ಲೂಟಿ ಮಾಡುವಂತಿಲ್ಲ: ವಿಜಯ್ ಖಡಕ್ ಸೂಚನೆ

ಬೆಂಗಳೂರು: ತಮಿಳು ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಕುತೂಹಲ ಮೂಡಿಸಿರುವ, ಕಾಲಿವುಡ್ ಸೂಪರ್‌ಸ್ಟಾರ್ ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನನಾಯಗನ್’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಜುಲೈ 23ರಂದು ವಿಶ್ವದಾದ್ಯಂತ ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದೆ ಎಂದು ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ (KVN Productions) ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಅಧಿಕೃತವಾಗಿ ಪ್ರಕಟಿಸಿದೆ.

ಖ್ಯಾತ ನಿರ್ದೇಶಕ ಹೆಚ್. ವಿನೋತ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರವು ಭರ್ಜರಿ ಆ್ಯಕ್ಷನ್, ಸೆಂಟಿಮೆಂಟ್ ಮತ್ತು ಬಲವಾದ ಸಾಮಾಜಿಕ ಸಂದೇಶವನ್ನು ಒಳಗೊಂಡಿದೆ.

ರಾಜಕೀಯ ಪ್ರವೇಶದ ಬೆನ್ನಲ್ಲೇ ಕೊನೆಯ ಸಿನಿಮಾ

ನಟ ವಿಜಯ್ ಸಕ್ರಿಯ ರಾಜಕೀಯಕ್ಕೆ ಧುಮುಕಿದ ಬಳಿಕ ನಟಿಸುತ್ತಿರುವ ಕೊನೆಯ ಸಿನಿಮಾ ಇದಾಗಿರುವುದರಿಂದ ಚಿತ್ರದ ಮೇಲಿನ ಕ್ರೇಜ್ ಗಗನಕ್ಕೇರಿದೆ. ಈ ಚಿತ್ರದಲ್ಲಿ ವಿಜಯ್‌ಗೆ ಜೋಡಿಯಾಗಿ ಕರಾವಳಿ ಸುಂದರಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದು, ಬಾಲಿವುಡ್ ಸ್ಟಾರ್ ಬಾಬಿ ಡಿಯೋಲ್ ಖಳನಾಯಕನಾಗಿ ಅಬ್ಬರಿಸಲಿದ್ದಾರೆ. ಇವರೊಂದಿಗೆ ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Tested by fire.
Forged by time.
Built for history.
The tougher the battle,
The louder the victory.#JanaNayaganFromJuly23#JanaNayakuduFromJuly23#JanNetaFromJuly23

The Hon’ble Chief Minister @actorvijay @KvnProductions #HVinoth @hegdepooja @anirudhofficial @thedeol… pic.twitter.com/21xjixgUBM

— KVN Productions (@KvnProductions) July 15, 2026

ಟಿಕೆಟ್ ದರ ಲೂಟಿ ಮಾಡುವಂತಿಲ್ಲ: ವಿಜಯ್ ಖಡಕ್ ಸೂಚನೆ

ದಳಪತಿ ಅಭಿಮಾನಿಗಳು ಸಿನಿಮಾ ಹಬ್ಬ ಆಚರಿಸಲು ಕಾತುರದಿಂದ ಕಾಯುತ್ತಿರುವ ಬೆನ್ನಲ್ಲೇ, ಸ್ವತಃ ವಿಜಯ್ ಥಿಯೇಟರ್ ಮಾಲೀಕರಿಗೆ ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆದಾಗ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಟಿಕೆಟ್ ದರವನ್ನು ದುಪ್ಪಟ್ಟು ಮಾಡಿ ಪ್ರೇಕ್ಷಕರನ್ನು ಸುಲಿಗೆ ಮಾಡುವುದು ಸಾಮಾನ್ಯ. ಆದರೆ, ತಮ್ಮ ಕೊನೆಯ ಸಿನಿಮಾಗೆ ಇಂತಹ ಯಾವುದೇ ಸುಲಿಗೆ ನಡೆಯಬಾರದು ಎಂದು ವಿಜಯ್ ತಾಕೀತು ಮಾಡಿದ್ದಾರೆ.

  • ಟಿಕೆಟ್ ದರ ಹೆಚ್ಚಳಕ್ಕೆ ಬ್ರೇಕ್: ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣಕ್ಕೆ ಟಿಕೆಟ್ ಮಾರಾಟ ಮಾಡಬಾರದು ಎಂದು ವಿಜಯ್ ತಂಡ ಥಿಯೇಟರ್ ಮಾಲೀಕರಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
  • ಅಕ್ರಮ ಶೋಗಳಿಗೆ ನಿರ್ಬಂಧ: ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುವುದು ಹಾಗೂ ನಿಯಮಬಾಹಿರವಾಗಿ ಬೆನಿಫಿಟ್ ಶೋಗಳನ್ನು ನಡೆಸಿ ಹಣ ಲೂಟಿ ಮಾಡುವುದಕ್ಕೆ ಸಂಪೂರ್ಣ ಕಡಿವಾಣ ಹಾಕುವಂತೆ ಚಿತ್ರದ ವಿತರಕರು ಹಾಗೂ ಚಿತ್ರಮಂದಿರಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ.

ರಾಜಕೀಯ ರಂಗದಲ್ಲೂ ಸಕ್ರಿಯರಾಗಿರುವ ವಿಜಯ್ ಅವರ ಈ ಜನಸ್ನೇಹಿ ನಿರ್ಧಾರಕ್ಕೆ ಅಭಿಮಾನಿ ವಲಯದಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯ ನಂತರ ‘ಜನನಾಯಗನ್’ ಬಾಕ್ಸ್ ಆಫೀಸ್‌ನಲ್ಲಿ ಯಾವೆಲ್ಲಾ ಹೊಸ ದಾಖಲೆಗಳನ್ನು ಬರೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

Amir khan – Jagadguru Paramahamsa ಆಮೀರ್ ಖಾನ್ ಹತ್ಯೆಗೆ 5 ಕೋಟಿ ರೂ. ಬಹುಮಾನ ಘೋಷಿಸಿ ವಿವಾದಕ್ಕೊಳಗಾದ ಜಗದ್ಗುರು ಪರಮಹಂಸ!

TAGGED:#Jananayaga #KVN Productions #Thalapathy Vijay #news #newsics
Share This Article
Facebook Twitter Copy Link Print
Previous Article Supreme Court ಅತ್ಯಾಚಾ*ರ ಯತ್ನ ಪ್ರಕರಣ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ
Next Article Aloo Bonda ಅಮೆರಿಕಾದಲ್ಲಿ ನಮ್ಮ ಆಲೂಬೋಂಡಾ ಹವಾ; ‘ಮಾಸ್ಟರ್‌ಷೆಫ್’​ನಲ್ಲಿ ಎಲ್ಲರನ್ನೂ ಹಿಂದಿಕ್ಕಿದ ಭಾರತದ ಯುವತಿ

Popular Posts

Staff Suspended ಜೈಲಿನಿಂದ ಕೈದಿಗಳು ತಪ್ಪಿಸಿಕೊಂಡ ಪ್ರಕರಣ: 8 ಅಧಿಕಾರಿಗಳು ಸಸ್ಪೆಂಡ್

2 Min Read

Aloo Bonda ಅಮೆರಿಕಾದಲ್ಲಿ ನಮ್ಮ ಆಲೂಬೋಂಡಾ ಹವಾ; ‘ಮಾಸ್ಟರ್‌ಷೆಫ್’​ನಲ್ಲಿ ಎಲ್ಲರನ್ನೂ ಹಿಂದಿಕ್ಕಿದ ಭಾರತದ ಯುವತಿ

1 Min Read

Kollywood ಜುಲೈ 23ರಂದು ವಿಶ್ವದಾದ್ಯಂತ ‘ಜನನಾಯಗನ್’ ಗ್ರ್ಯಾಂಡ್‌ ರಿಲೀಸ್

2 Min Read

Supreme Court ಅತ್ಯಾಚಾ*ರ ಯತ್ನ ಪ್ರಕರಣ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ

2 Min Read

You Might Also Like

ಪ್ರಮುಖಆರೋಗ್ಯ

Rice Testing ನೀವು ಸೇವಿಸುವ ಅಕ್ಕಿ ಪ್ಲಾಸ್ಟಿಕ್ ಇರಬಹುದು ಎಚ್ಚರ! ಅಸಲಿ-ನಕಲಿ ಪತ್ತೆ ಹಚ್ಚಲು ಮನೆಯಲ್ಲೇ ಮಾಡಿ ಈ 3 ಸಿಂಪಲ್ ಟೆಸ್ಟ್

2 Min Read
ಪ್ರಮುಖಆರೋಗ್ಯ

Free HPV Vaccine ಸರ್ಕಾರದಿಂದ ಮಹತ್ವದ ಹೆಜ್ಜೆ;14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ ಅಭಿಯಾನ ಆರಂಭ

2 Min Read
ಪ್ರಮುಖCrimeಕರ್ನಾಟಕ

Dharmasthala Case ಧರ್ಮಸ್ಥಳ ಬುರುಡೆ ಪ್ರಕರಣ; ಬೆಳ್ತಂಗಡಿ ಕೋರ್ಟ್‌ಗೆ 7,005 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ SIT

2 Min Read
ಪ್ರಮುಖದೇಶವೈರಲ್

Viral Video ಮನುಷ್ಯತ್ವ ಅಂದ್ರೆ ಇದೇ ಅಲ್ವಾ? ಬೀದಿ ನಾಯಿಗೆ ಗಾಳಿ ಬೀಸಿದ ವೃದ್ಧ- ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?