newsics.com| ನ್ಯೂಸಿಕ್ಸ್
ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯ ರಾಜಕೀಯದಲ್ಲಿ ಗೃಹಲಕ್ಷ್ಮಿ (Gruhalakshmi) ಗುದ್ದಾಟ ನಡೆಯುತ್ತಲೇ ಇದೆ. ಪರಿಷ್ಕರಣೆ (Revision) ಹೆಸರಲ್ಲಿ ಸರ್ಕಾರ ಸರ್ಜರಿ ಶುರುಮಾಡಿದೆ.
ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳ ಜತೆ ಜನರೂ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೆ ಭಾನುವಾರ ನಡೆದ ಕ್ಯಾಬಿನೆಟ್ ಮೀಟಿಂಗ್ನಲ್ಲಿ (Cabinet Meeting) ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆಗೆ ಮುಂದಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಬಯೋ ಮೆಟ್ರಿಕ್ ಅಥವಾ ಫೇಸಿಯಲ್ ಅಥೆಂಟಿಕೇಷನ್ ದೃಢೀಕರಣದ ಮೂಲಕ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ತೀರ್ಮಾನಿಸಿದೆ ಎಂಬ ಮಾಹಿತಿ ಸಿಕ್ಕಿದೆ.
ಮೃತಪಟ್ಟವರ ಅಕೌಂಟಿಗೂ ಹಣ ಜಮಾವಣೆ ಹಿನ್ನೆಲೆ ರಾಜ್ಯಸರ್ಕಾರ ಗೃಹಲಕ್ಷ್ಮಿ ಸರ್ಜರಿಗೆ ಮುಂದಾಗಿದ್ದು, ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಚರ್ಚಿಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ.
‘ಆಪರೇಷನ್ ಗೃಹಲಕ್ಷ್ಮಿ’
ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ” ಹೆಸರಿನಲ್ಲಿ ನಿಜವಾದ ಫಲಾನುಭವಿಗಳನ್ನು ಗುರುತು ಮಾಡುವ ಕೆಲಸ ಮಾಡ್ತಿದೆ. ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ.
4.30 ಲಕ್ಷ ಫಲಾನುಭವಿಗಳ ಹೆಸರು ಡಿಲೀಟ್!
ಒಟ್ಟು 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗಿದೆ. ಸದ್ಯ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದ್ದು, ಈ ಮೂಲಕ ನೂರಾರು ಕೋಟಿ ರೂ. ಉಳಿತಾಯ ಆಗಲಿದೆ.
ಗೃಹಲಕ್ಷ್ಮಿ ಯೋಜನೆಯ ಮಾಸಿಕ 2,000 ರೂಪಾಯಿ ಹಣವನ್ನು ಪಡೆಯಲು ಫಲಾನುಭವಿ ಮಹಿಳೆಯರು ಒಂದು ತಿಂಗಳ ಒಳಗೆ ಬಯೋಮೆಟ್ರಿಕ್ ಕಡ್ಡಾಯ ಆಗಿದೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಬಯೋಮೆಟ್ರಿಕ್ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಬ್ಯಾಂಕ್ ಖಾತೆಗೆ ಹಣ ಜಮೆ ಆಗುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.