newsics.com| ನ್ಯೂಸಿಕ್ಸ್
ಸುಳ್ಯ(ದಕ್ಷಿಣ ಕನ್ನಡ): ಕೆಲಸಕ್ಕೆಂದು ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಅಪ್ರಾಪ್ತ ಬಾಲಕಿ ಸುಮಾರು ಎರಡೂವರೆ ತಿಂಗಳ ಬಳಿಕ ಪತ್ತೆಯಾಗಿದ್ದಾಳೆ.
ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಡಬದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರಿ ಮೇ 7, 2026ರಂದು ಮಂಗಳೂರಿಗೆ ಕೆಲಸಕ್ಕೆ ಹೋಗುತ್ತಿರುವುದಾಗಿ ಮನೆಯಿಂದ ತೆರಳಿದ್ದಳು. ಆದರೆ ಬಳಿಕ ಮನೆಗೆ ಹಿಂದಿರುಗದೆ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ.
ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 137(2)ರ ಅಡಿಯಲ್ಲಿ ಕಾಣೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಮುಂದುವರಿಸಿದ್ದ ಪೊಲೀಸರು ಜುಲೈ 22ರಂದು ಕಾಣೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ವಿಚಾರಣೆ ವೇಳೆ, ಕಡಬ ನಿವಾಸಿಯಾದ ಧನುಷ್(18) ಎಂಬಾತ ತನಗೆ ಸುಳ್ಳು ಭರವಸೆ ನೀಡಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದು, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ.
ಬಾಲಕಿಯ ಹೇಳಿಕೆ ಆಧರಿಸಿ, ಭಾರತೀಯ ನ್ಯಾಯ ಸಂಹಿತೆಯ ಕಲಂ 64(2)(m) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ (POCSO) ಕಾಯ್ದೆಯ ಕಲಂ 5(l) ಮತ್ತು 6 ಅನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ.
ಆರೋಪಿ ಧನುಷ್ನನ್ನು ಜುಲೈ 22ರಂದು ಬಂಧಿಸಿರುವ ಪೊಲೀಸರು ನ್ಯಾಯಾಂಗ ಕ್ರಮ ಕೈಗೊಂಡಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ
Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!
CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!