newsics.com | ನ್ಯೂಸಿಕ್ಸ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಮಲೆನಾಡು ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಶಿರಸಿ ತಾಲೂಕಿನ ಕುಳವೆ ಪಂಚಾಯತ್ ವ್ಯಾಪ್ತಿಯ ಕಾಗೇರಿ ಗ್ರಾಮದಲ್ಲಿ ಬರೂರು ಹೊಳೆ ಉಕ್ಕಿ ಹರಿಯುತ್ತಿದ್ದು, ನೂರಾರು ಎಕರೆ ಭತ್ತದ ಗದ್ದೆ ಹಾಗೂ ತೋಟಗಳು ಸಂಪೂರ್ಣವಾಗಿ ನೀರುಪಾಲಾಗಿವೆ. ರಸ್ತೆಗಳ ಮೇಲೂ ನೀರು ಹರಿಯುತ್ತಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಇತ್ತ ಅಘನಾಶಿನಿ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಹೊಸಗದ್ದೆ ಬಳಿ ನದಿ ನೀರಿನಲ್ಲಿ 12 ಅಡಿ ಉದ್ದದ ಬೃಹತ್ ಹೆಬ್ಬಾವೊಂದು ತೇಲಿ ಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಇನ್ನು ಕಾರವಾರದ ಮುದುಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ರಸ್ತೆಗೆ ಕಲ್ಲುಬಂಡೆಗಳು ಉರುಳಿಬಿದ್ದಿವೆ. ಆದರೆ ಈ ಮಾರ್ಗದಲ್ಲಿ ಈಗಾಗಲೇ ಸಂಚಾರ ನಿರ್ಬಂಧಿಸಿದ್ದರಿಂದ ದೊಡ್ಡ ಮಟ್ಟದ ಅನಾಹುತ ತಪ್ಪಿದೆ.
ಇನ್ನೊಂದೆಡೆ ಜೋಯಿಡಾದ ಕಾತೇಲಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಅಡಿಕೆ ಮರ ಬಿದ್ದು ಆಸ್ತಿಪಾಸ್ತಿ ಹಾನಿಯಾಗಿದ್ದು, ನಿವಾಸಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ನಡುವೆ, ಹುಬ್ಬಳ್ಳಿ-ಧಾರವಾಡ ಹಾಗೂ ಯಲ್ಲಾಪುರ ಭಾಗದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಬೇಡ್ತಿ (ಗಂಗಾವಳಿ) ನದಿ ಮೈದುಂಬಿ ಹರಿಯುತ್ತಿದ್ದು, ಪ್ರಸಿದ್ಧ ಮಾಗೋಡು ಜಲಪಾತ ಭೋರ್ಗರೆಯುತ್ತಾ ಪ್ರಕೃತಿ ಪ್ರಿಯರನ್ನು ತನ್ನತ್ತ ಸೆಳೆಯುತ್ತಿದೆ.
Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ