newsics.com/ನ್ಯೂಸಿಕ್ಸ್
ಬೆಂಗಳೂರು: ಆಫ್ರಿಕಾ ಖಂಡದ ದೇಶಗಳಲ್ಲಿ ಇಬೋಲಾ ವೈರಸ್ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯಾದ್ಯಂತ ತೀವ್ರ ನಿಗಾವಹಿಸಿದ್ದು, ಸಾರ್ವಜನಿಕ ಮುನ್ನೆಚ್ಚರಿಕಾ ಪ್ರಕಟಣೆಯೊಂದನ್ನು ಹೊರಡಿಸಿದೆ.
ಇತ್ತೀಚೆಗೆ (17 ಮೇ 2026 ರಂದು) ವಿಶ್ವ ಆರೋಗ್ಯ ಸಂಸ್ಥೆ ಯು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ಉಗಾಂಡಾ ದೇಶಗಳಲ್ಲಿ ಇಬೋಲಾ ವೈರಸ್ ತೀವ್ರವಾಗಿ ಹರಡುತ್ತಿರುವುದನ್ನು ಗಮನಿಸಿ, ಇದನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಇಬೋಲಾ ಪ್ರಕರಣಗಳು ವರದಿಯಾಗಿಲ್ಲದಿದ್ದರೂ, ಅಂತರರಾಷ್ಟ್ರೀಯ ಪ್ರಯಾಣ ಮತ್ತು ವ್ಯಾಪಾರ ವಹಿವಾಟುಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರವು ಈಗಿನಿಂದಲೇ ಸನ್ನದ್ಧವಾಗಿದೆ.
ಸೋಂಕಿತ ವ್ಯಕ್ತಿಗಳ ರಕ್ತ, ದೇಹದ ಅಂಗಗಳು, ಅಥವಾ ಶಾರೀರಿಕ ದ್ರವಗಳೊಂದಿಗೆ (ಲಾಲಾರಸ, ಬೆವರು ಇತ್ಯಾದಿ) ನೇರ ಸಂಪರ್ಕ ಹೊಂದುವುದರಿಂದ ಈ ರೋಗ ಹರಡುತ್ತದೆ. ಅಲ್ಲದೆ, ಸೋಂಕಿತರು ಬಳಸಿದ ಹಾಸಿಗೆ, ಬಟ್ಟೆ, ಮತ್ತು ಸಿರಿಂಜ್ನಂತಹ ಕಲುಷಿತ ವಸ್ತುಗಳನ್ನು ಮುಟ್ಟುವುದರಿಂದಲೂ ವೈರಸ್ ಹರಡಬಹುದು. ಹೀಗಾಗಿ, ಸೋಂಕಿತರ ಉಪಚರಿಸುವ ಆರೋಗ್ಯ ಸಿಬ್ಬಂದಿ ಹಾಗೂ ಕುಟುಂಬದ ಸದಸ್ಯರು ಹೆಚ್ಚಿನ ಅಪಾಯದ ವಲಯದಲ್ಲಿರುತ್ತಾರೆ.
ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ