Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಂಗಾಳದಲ್ಲಿ ಗೋಹತ್ಯೆ ರಸ್ತೆ ನಮಾಜ್ ಮತ್ತು ಧ್ವನಿವರ್ಧಕಗಳ ಆರ್ಭಟಕ್ಕೆ ಬ್ರೇಕ್
ದೇಶಪ್ರಮುಖ

ಬಂಗಾಳದಲ್ಲಿ ಗೋಹತ್ಯೆ ರಸ್ತೆ ನಮಾಜ್ ಮತ್ತು ಧ್ವನಿವರ್ಧಕಗಳ ಆರ್ಭಟಕ್ಕೆ ಬ್ರೇಕ್

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳದಲ್ಲಿ ದೀದೀ ಸರ್ಕಾರದ ಪತನ ಆಗಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹಲವಾರು ಬದಲಾವಣೆಗಳನ್ನು ರಾಜ್ಯ ಕಾಣುತ್ತಿದೆ. ಇದಾಗಲೇ ಅನಧಿಕೃತ, ಅಕ್ರಮ ಸ್ಥಳಗಳ ಮೇಲೆ ಬುಲ್ಡೋಜರ್​ ಪ್ರಹಾರ ಮಾಡಿದೆ.

ಮಮತಾ ಅವರ ಸುದೀರ್ಘ ಆಡಳಿತಾವಧಿಯಲ್ಲಿ ಜಾರಿಯಲ್ಲಿದ್ದ ತುಷ್ಟೀಕರಣ ನೀತಿ ಮತ್ತು ಅಕ್ರಮ ನುಸುಳುಕೋರರ ಪರ ನಿರ್ಧಾರಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿರುವ ಸುವೇಂದು ಸರ್ಕಾರ, ರಾಜ್ಯದಲ್ಲಿ ಹಿಂದೂ ಮತಗಳ ಬಲವಾದ ಧ್ರುವೀಕರಣಕ್ಕೆ ಮುನ್ನುಡಿ ಬರೆದಿದೆ.

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ನಿಷೇಧ, ರಸ್ತೆಗಳಲ್ಲಿ ಸಾರ್ವಜನಿಕ ನಮಾಜ್ ತಡೆ ಹಾಗೂ ಬಕ್ರೀದ್ ವೇಳೆ ಸಾರ್ವಜನಿಕವಾಗಿ ಗೋಹತ್ಯೆ ಮಾಡುವುದರ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವ ಮೂಲಕ ಸುವೇಂದು ಅಧಿಕಾರಿ ಇಡೀ ದೇಶದ ಗಮನ ಸೆಳೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಅವರು ಅಧಿಕಾರಕ್ಕೆ ಬಂದ ತಕ್ಷಣ ಅಪರಾಧಿಗಳ ವಿರುದ್ಧ ನಾಲ್ಕು ಹಂತದ ಕಠಿಣ ಸೂತ್ರಗಳನ್ನು ಜಾರಿಗೆ ತಂದಿದ್ದರು. ಪ್ರಭಾವಿ ಅಪರಾಧಿಗಳಿಗೆ ಯಾವುದೇ ರಿಯಾಯಿತಿ ನೀಡದಿರುವುದು, ಬುಲ್ಡೋಜರ್ ಪ್ರಯೋಗ, ಮತ್ತು ಎನ್‌ಕೌಂಟರ್‌ಗಳ ವೇಗವನ್ನು ಹೆಚ್ಚಿಸುವ ಮೂಲಕ ಯುಪಿಯಲ್ಲಿ ಅಪರಾಧ ಮುಕ್ತ ಆಡಳಿತ ತಂದಿದ್ದರು. ಈಗ ಬಂಗಾಳದಲ್ಲೂ ಅದೇ ಮಾದರಿಯ ಎನ್‌ಕೌಂಟರ್ ಮತ್ತು ಬುಲ್ಡೋಜರ್ ಸಂಸ್ಕೃತಿ ಆರಂಭವಾಗಿದೆ. ಜೈಲಿನಿಂದ ಕೋರ್ಟ್‌ಗೆ ವಿಚಾರಣೆಗೆ ಹೋಗುವಾಗಲೂ ಅಪರಾಧಿಗಳು ಎನ್‌ಕೌಂಟರ್ ಭೀತಿಯಿಂದ ನಡುಗುವಂತಹ ವಾತಾವರಣವನ್ನು ಸುವೇಂದು ಸರ್ಕಾರ ಸೃಷ್ಟಿಸಿದೆ.

ಸ್ವಾತಂತ್ರ್ಯದ ನಂತರ ರಾಜಕೀಯ ಲಾಭ ಹಾಗೂ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಂಗಾಳದ ಯಾವುದೇ ಸರ್ಕಾರಗಳು ಗೋಹತ್ಯೆ ತಡೆ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರಲಿಲ್ಲ. ಮಮತಾ ಆಡಳಿತದಲ್ಲಿ ಸಾಂಸ್ಥಿಕ ರೂಪ ಪಡೆದುಕೊಂಡಿದ್ದ ಗೋ ಕಳ್ಳಸಾಗಣೆಯ ವಿರುದ್ಧ ಸುವೇಂದು ಈಗ ಹಳೆಯ ಕಾನೂನನ್ನು ಮಾರ್ಪಡಿಸಿ ಅತ್ಯಂತ ಕಠಿಣ ಶಿಕ್ಷೆಯ ನಿಯಮವನ್ನು ತಂದಿದ್ದಾರೆ.

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕವಾಗಿ ಗೋಹತ್ಯೆ ಮಾಡುವುದನ್ನು ಸಂಪೂರ್ಣವಾಗಿ ಅಪರಾಧೀಕರಿಸಲಾಗಿದೆ. ಆರಂಭದಲ್ಲಿ ಮುಸ್ಲಿಂ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾದರೂ, ಕೋಲ್ಕತ್ತಾದ ಐತಿಹಾಸಿಕ ನಾಖೋಡಾ ಮಸೀದಿಯ ಇಮಾಮ್ ಅವರು ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿ, ಸಂಘರ್ಷದ ಹಾದಿ ಬೇಡ ಎಂದು ಕರೆ ನೀಡಿರುವುದು ಮುಸ್ಲಿಂ ಸಮುದಾಯದ ಮನಸ್ಥಿತಿಯಲ್ಲಿ ಬದಲಾವಣೆ ತಂದಿದೆ.

ತಮಿಳುನಾಡು ಸಿಎಂ ದಳಪತಿ ವಿಜಯ್ ನಟನೆಯ ಜನ ನಾಯಗನ್ ಬಿಡುಗಡೆ ದಿನಾಂಕ ಫಿಕ್ಸ್

TAGGED:Cow slaughter in Bengal: Road prayers and loudspeakers put a stop to chanting
Share This Article
Facebook Twitter Copy Link Print
Previous Article ತಮಿಳುನಾಡು ಸಿಎಂ ದಳಪತಿ ವಿಜಯ್ ನಟನೆಯ ಜನ ನಾಯಗನ್ ಬಿಡುಗಡೆ ದಿನಾಂಕ ಫಿಕ್ಸ್
Next Article Breakfast Recipe ಬೆಳಗ್ಗಿನ ತಿಂಡಿಗೆ ಬಿಸಿ ಬಿಸಿ ಹಲಸಿನ ದೋಸೆ! ಸಿಂಪಲ್ ರೆಸಿಪಿ ಇಲ್ಲಿದೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?