Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!
ಕರ್ನಾಟಕಪ್ರಮುಖ

ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!

Share
2 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ರಾಜಕಾರಣದಲ್ಲಿ ದಿಢೀರ್ ಬಿರುಸಿನ ಬೆಳವಣಿಗೆಗಳು ಆರಂಭವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬುಲಾವ್ ನೀಡಿದೆ. ಈ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ದೆಹಲಿ ಪ್ರವಾಸ ಕೈಗೊಳ್ಳುವ ಸುಳಿವು ನೀಡಿರುವುದು ಕೈ ಪಾಳಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 7 ಗಂಟೆಗೆ ರಾಜಧಾನಿ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬಂದ ಹಿನ್ನೆಲೆಯಲ್ಲಿ ಸಿಎಂ ತಮ್ಮ ಮುಂಚಿತ ಕಾರ್ಯಕ್ರಮಗಳನ್ನು ಬದಿಗೊತ್ತಿ ಹೊರಡಲು ಸಿದ್ಧತೆ ನಡೆಸಿದ್ದಾರೆ. ಸಚಿವ ಸಂಪುಟ ಪುನಾರಚನೆ, ನಿಗಮ ಮಂಡಳಿ ನೇಮಕಾತಿ ಅಥವಾ ರಾಜ್ಯ ಸರ್ಕಾರದ ಪ್ರಮುಖ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚಿಸಲು ಹೈಕಮಾಂಡ್ ಈ ಬುಲಾವ್ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಡಿಕೆಶಿ ‘ದೆಹಲಿ’ ಬಾಂಬ್!

ಸಿಎಂ ದೆಹಲಿ ಪ್ರವಾಸದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, “ನನ್ನನ್ನು ಕರೆದರೆ ನಾನು ಸಹ ದೆಹಲಿಗೆ ಹೋಗುತ್ತೇನೆ” ಎಂದು ಹೇಳುವ ಮೂಲಕ ಹೊಸ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ಹೈಕಮಾಂಡ್‌ನಿಂದ ತಮಗೆ ಅಧಿಕೃತವಾಗಿ ಇನ್ನು ಯಾವುದೇ ಕರೆ ಬರದಿದ್ದರೂ, ಇಂದೇ ದೆಹಲಿಗೆ ಹೋಗಲು ಡಿಕೆಶಿ ಆಂತರಿಕವಾಗಿ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ನಾಯಕರ ಭೇಟಿಗೆ ಪ್ಲಾನ್

ಸದ್ಯದ ಮಾಹಿತಿ ಪ್ರಕಾರ, ಹೈಕಮಾಂಡ್‌ನಿಂದ ನೇರ ಆಹ್ವಾನ ಇಲ್ಲದಿದ್ದರೂ ಸಹ ಡಿ.ಕೆ. ಶಿವಕುಮಾರ್ ಅವರು ಇಂದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಯಲ್ಲೇ ಅಥವಾ ಅವರ ಬೆನ್ನಲ್ಲೇ ದೆಹಲಿಗೆ ಹಾರುವ ಸಾಧ್ಯತೆ ದಟ್ಟವಾಗಿದೆ. ಅಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಮಾನಗಳ ಕುರಿತು ಚರ್ಚಿಸಲು ಅವರು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಇಬ್ಬರೂ ಏಕಕಾಲಕ್ಕೆ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವುದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ಎಡೆಮಾಡಿಕೊಟ್ಟಿದೆ. ಸರ್ಕಾರದ ಆಡಳಿತದ ಮೇಲಿನ ಹಿಡಿತ, ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಈ ಜಂಟಿ ಅಥವಾ ಸರಣಿ ಭೇಟಿಗಳು ಅತ್ಯಂತ ಮಹತ್ವ ಪಡೆದುಕೊಂಡಿವೆ.

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬುಲಾವ್​​; ದೆಹಲಿಯತ್ತ ಸಿಎಂ

 

TAGGED:DCM DK Shivakumar plans to go to Delhi!Following the CM
Share This Article
Facebook Twitter Copy Link Print
Previous Article ಯುರೋಪಿಯನ್ನರು ಭಾರತೀಯರಿಂದ ಈ ಐದು ವಿಷಯಗಳನ್ನು ಕಲಿಯಲೇಬೇಕು ಎಂದ ವಿದೇಶಿ ಮಹಿಳೆ
Next Article ತ್ವಿಶಾ ಶರ್ಮಾ ಸಾವು ಕೇಸ್; ಸಿಬಿಐ ತನಿಖೆಗೆ ಆದೇಶ ನೀಡಿದ ಸುಪ್ರೀಂ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?