Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ : ಇನ್ಮುಂದೆ ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!
ಕರ್ನಾಟಕಪ್ರಮುಖ

ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ : ಇನ್ಮುಂದೆ ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ  ಮೇಜರ್ ಬದಲಾವಣೆ ತರುವುದಕ್ಕೆ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮೀ ಯೋಜನೆ ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ನಿರ್ಧಾರ ಮಾಡಿದೆ.

ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲ ಫಲಾನುಭವಿಗಳು ತಮ್ಮ ಖಾತೆಯನ್ನು ಬಯೋಮೆಟ್ರಿಕ್‌ ಹಾಗೂ ಮೊಬೈಲ್‌ ಸಂಖ್ಯೆಯೊಂದಿಗೆ ಮರು ನೋಂದಣಿ (ನವೀಕರಣ) ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಂದು ವೇಳೆ ನವೀಕರಿಸದಿದ್ದರೆ ಬ್ಯಾಂಕ್‌ ಖಾತೆಗೆ ಹಣ ಜಮೆಯಾಗುವುದಿಲ್ಲ. ಈ ಕುರಿತು ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ.

ಗೃಹಲಕ್ಷ್ಮಿ ಯೋಜನೆಯ ಲಕ್ಷಾಂತರ ಮಂದಿ ಫಲಾನುಭವಿಗಳು ನಿಧನರಾಗಿದ್ದಾರೆ. ಎರಡು ಲಕ್ಷ ಮಂದಿ ಮೃತಪಟ್ಟಿದ್ದರೂ ಫಲಾನುಭವಿಗಳಾಗಿದ್ದಾರೆ. 50 ಸಾವಿರಕ್ಕೂ ಹೆಚ್ಚು ಆದಾಯ ತೆರಿಗೆ ಪಾವತಿದಾರರು ಯೋಜನೆಯ ಲಾಭ ಪಡೆಯುತ್ತಿದ್ದರು. ಕೆಲ ಫಲಾನುಭವಿಗಳ ಖಾತೆಗೆ ಸಂದಾಯವಾದ ಗೃಹಲಕ್ಷ್ಮಿ ಹಣ ಈ ಮೊದಲು ಮಾಡಿರುವ ಸಾಲಕ್ಕೆ ಜಮೆಯಾಗುತ್ತಿದೆ. ಕೆಲವರ ಮೊಬೈಲ್‌ ಸಂಖ್ಯೆ ಕೂಡ ಬದಲಾಗಿದೆ. ಹೀಗಾಗಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ಸಿಗಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯ ಖಾತೆಗಳನ್ನು ಮತ್ತೊಮ್ಮೆ ನವೀಕರಣ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

 

ಫಲಾನುಭವಿಗಳು ತಮ್ಮ ಹತ್ತಿರದ ಬೆಂಗಳೂರು ಒನ್‌ ಅಥವಾ ಕರ್ನಾಟಕ ಒನ್‌ ಕೇಂದ್ರಗಳಿಗೆ ಭೇಟಿ ನೀಡಿ, ಚಾಲ್ತಿಯಲ್ಲಿರುವ ಮೊಬೈಲ್‌ ಸಂಖ್ಯೆ ಹಾಗೂ ಬಯೋಮೆಟ್ರಿಕ್‌ ನೀಡುವ ಮೂಲಕ ತಮ್ಮ ಖಾತೆಯನ್ನು ಮರು-ನೋಂದಣಿ ಮಾಡಿಸಿಕೊಳ್ಳಬಹುದು.

ಫಲಾನುಭವಿಗಳು ಎಪಿಎಲ್‌ ಕಾರ್ಡ್‌ ಅಥವಾ ಬಿಪಿಎಲ್‌ ಕಾರ್ಡ್‌ ಹೊಂದಿರಬಹುದು. ಆದರೆ, ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇಲಾಖೆ ಈಗಾಗಲೇ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದೆ. ಇವರಲ್ಲಿಬಹುತೇಕರು ಆದಾಯ ತೆರಿಗೆ ಪಾವತಿಸುತ್ತಿದ್ದುದರಿಂದ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಇವರಿಗೆ ಗೃಹಲಕ್ಷ್ಮಿ ಯೋಜನೆ ರದ್ದಾಗಲಿದೆ.

ಸದ್ಯಕ್ಕೆ ನಾವು ಯಾವುದೇ ಫಲಾನುಭವಿಯ ಹೆಸರನ್ನು ನೇರವಾಗಿ ಡಿಲೀಟ್‌ ಮಾಡುತ್ತಿಲ್ಲ. ಇದು ಕೇವಲ ‘ಒನ್‌ ಟೈಮ್‌ ಬಯೋಮೆಟ್ರಿಕ್‌’ ಪದ್ಧತಿ. ಮಹಿಳೆಯರು ಕೇವಲ ಒಂದು ಬಾರಿ ಬಯೋಮೆಟ್ರಿಕ್‌ ನೀಡಿದರೆ ಸಾಕು, ಹಣ ಎಂದಿನಂತೆ ಖಾತೆಗೆ ಜಮೆಯಾಗುತ್ತದೆ. ನವೀಕರಣ ಮಾಡದ ಖಾತೆಗಳು ಮಾತ್ರ ಸ್ವಯಂಚಾಲಿತವಾಗಿ ರದ್ದಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ

TAGGED:Changes in Grihalakshmi Yojana: Biometrics are now mandatorymoney will be cut if not renewed!
Share This Article
Facebook Twitter Copy Link Print
Previous Article ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ
Next Article CNG prices hike ಸಿಎನ್‌ಜಿ ಬೆಲೆಯಲ್ಲಿ ಕೆ.ಜಿಗೆ ಮತ್ತೆ ₹2 ಏರಿಕೆ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?