newsics.com
ಉಡುಪಿ: ಉಡುಪಿಯಲ್ಲಿ ಗಂಡನೊಬ್ಬ ಹೆಂಡತಿಯನ್ನು ಹೊಡೆದು ಕೊಂದಿದ್ದಾನೆ. ಕಾರಣ ಆಕೆಯ ಸೋಶಿಯಲ್ ಮೀಡಿಯಾ ಹುಚ್ಚು.
ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿ ಎಂಬಲ್ಲಿ ಘಟನೆ ನಡೆದಿದೆ. ಬೀದರ್ ಮೂಲದ ಜಯಶ್ರೀ, ತನ್ನ ಪತಿ ಕಿರಣ್ ಉಪಾಧ್ಯಾಯ ಕೈಯಲ್ಲೆ ಸಾವನ್ನಪ್ಪಿದ್ದು, ಈ ಸಂಬಂಧ ಪತಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಜಾಲಿಯಾಗಿದ್ದ ನವ ಜೋಡಿಗಳಿಗೆ ಅದು ಏನಾಯಿತೋ ಗೊತ್ತಿಲ್ಲ. ನಿನ್ನೆ ರಾತ್ರಿ ಮೊಬೈಲ್ ಬಳಕೆ ವಿಚಾರವಾಗಿ ಪತಿ, ಪತ್ನಿ ಜಗಳವಾಡಿಕೊಂಡು ಗಲಾಟೆ ತಾರಕಕ್ಕೇರಿದ್ದಲ್ಲದೇ ಪತಿ ಪತ್ನಿಗೆ ಹೊಡೆದ ಪರಿಣಾಮ ಪತ್ನಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ನಡೆದಿದೆ.