newsics.com/ನ್ಯೂಸಿಕ್ಸ್
ನವದೆಹಲಿ: ಭಾರತದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಗಳಾದಏರ್ ಇಂಡಿಯಾ ಹಾಗೂ ಇಂಡಿಗೋ 250 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ.
ಮಧ್ಯಪ್ರಾಚ್ಯದ ತೈಲ ಬಿಕ್ಕಟ್ಟಿನಿಂದಾಗಿ ಇಂಧನ ವೆಚ್ಚ ದುಬಾರಿಯಗುತ್ತಿದೆ. ಇತ್ತ ಪ್ರಯಾಣಿಕರ ಸಂಖ್ಯೆ ಕೂಡ ಕುಸಿಯುತ್ತಿರುವುದರಿಂದ ಕಂಪನಿಗಳ ಮೇಲೆ ಹೊರೆ ಹೆಚ್ಚಾಗುತ್ತಿದೆ. ಇದರಿಂದ ಈಗಾಗಲೇ ವಿಮಾನಯಾನದ ಪ್ರಯಾಣದರ ಕೂಡ ಹೆಚ್ಚಳ ಆಗಿದೆ. ಮುಂದಿನ ಆಗಸ್ಟ್ ವರೆಗೂ ತೈಲ ಬಿಕ್ಕಟ್ಟು ಮುಂದುವರೆಯುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಏರ್ ಇಂಡಿಯಾ ತನ್ನ ದೇಶೀಯ ವಿಮಾನ ಸಂಚಾರ ವೇಳಾಪಟ್ಟಿಯಲ್ಲಿ ಶೇ.22 ರಷ್ಟು ಕಡಿತಗೊಳಿಸಿದೆ. ಈ ಮೂಲಕ ಪ್ರತಿದಿನ ಸುಮಾರು 110 ವಿಮಾನಗಳ ಹಾರಾಟ ಕಡಿತಗೊಳಿಸಿದಂತಾಗುತ್ತದೆ. ಈ ಹಿಂದೆ ಈ ಸಂಸ್ಥೆಯಿಂದ 500 ವಿಮಾನಗಳು ದೇಶದಲ್ಲಿ ಹಾರಾಟ ನಡೆಸುತ್ತಿದ್ದವು.
ಇಂಡಿಗೋ ಸಂಸ್ಥೆಯಿಂದ ದಿನಕ್ಕೆ ಸುಮಾರು 2,200 ವಿಮಾನಗಳು ಹಾರಾಟ ನಡೆಸುತ್ತಿದ್ದವು. ಇದೀಗ ಇಂಡಿಗೋ ಸಂಸ್ಥೆ ಶೇ.5-7 ರಷ್ಟು ಕಡಿತಗೊಳಿಸಲು ಮುಂದಾಗಿದೆ.
ಮುಂಬೈನಿಂದ ಜೈಪುರ, ಗೋವಾ, ಬೆಂಗಳೂರು, ಹೈದರಾಬಾದ್, ಚೆನ್ನೈ, ಅಹಮದಾಬಾದ್, ನಾಗ್ಪುರ, ಪಾಟ್ನಾ ಮತ್ತು ಭೋಪಾಲ್ಗಳಿಗೆ ವಿಮಾನ ಸಂಚಾರ ಕಡಿಮೆಯಾಗಲಿದೆ. ದೆಹಲಿಯಿಂದ ಗೋವಾ, ಮುಂಬೈ, ಬೆಂಗಳೂರು, ಹೈದರಾಬಾದ್, ಚೆನ್ನೈ, ಅಹಮದಾಬಾದ್, ಲಕ್ನೋ, ಕೊಚ್ಚಿ ಮತ್ತು ಕೋಲ್ಕತ್ತಾಗೆ ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರುತ್ತದೆ. ದಕ್ಷಿಣದ ಪ್ರಮುಖ ಕೇಂದ್ರವಾಗಿರುವ ಬೆಂಗಳೂರಿಗೆ ಬೇರೆ ಬೇರೆ ಕಡೆಯಿಂದ ವಾಪಾಸ್ ತೆರಳುವ ವಿಮಾನಗಳ ಸಂಖ್ಯೆ ಕಡಿಮೆಯಾಗಲಿವೆ.
Karnataka CLP Meeting ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ