newsics.com/ನ್ಯೂಸಿಕ್ಸ್
ಬೆಂಗಳೂರು: ಧಾರಾಕಾರ ಮಳೆಗೆ ಮತ್ತೊಂದು ಕಾಂಪೌಂಡ್ ಕುಸಿದು ಆಟೋ ಚಾಲಕರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂಜೆ ವೇಳೆ ಸುರಿಧ ಭಾರಿ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಈ ಅನಾಹುತ ಸಂಭವಿಸಿದೆ. ಬೋರಯ್ಯ ಮೃತ ಆಟೋ ಚಾಲಕ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್ : ಈ ಮಾರ್ಗಸೂಚಿ ಪಾಲನೆ ಕಡ್ಡಾಯ