newsics.com/ನ್ಯೂಸಿಕ್ಸ್
ಮುಂಬೈ: ಮಹಾರಾಷ್ಟ್ರದ ಪುಣೆ ಮತ್ತು ಪಿಂಪ್ರಿ-ಚಿಂಚವಡದಲ್ಲಿ ಕಳ್ಳಭಟ್ಟಿ (ವಿಷಪೂರಿತ ಮದ್ಯ) ಸೇವಿಸಿ ಕಳೆದ 48 ಗಂಟೆಗಳಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.
ಅಸ್ವಸ್ಥಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಪ್ರಾಣ ಉಳಿಸಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.
ದುರಂತದ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿರುವ ಪೊಲೀಸರು, ಈ ಅಕ್ರಮ ದಂಧೆಯ ಮುಖ್ಯ ಸೂತ್ರಧಾರಿ ಯೋಗೇಶ್ ಗಾಯಕ್ವಾಡ್ ಎಂಬಾತನನ್ನು ಬಂಧಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಈತ ದೀರ್ಘಕಾಲದಿಂದ ಈ ಭಾಗದಲ್ಲಿ ಅಕ್ರಮ ಹಾಗೂ ವಿಷಪೂರಿತ ಮದ್ಯ ಸರಬರಾಜು ಮಾಡುತ್ತಿದ್ದ. ಈ ಜಾಲದ ಹಿಂದೆ ಇರುವ ಇತರ ಪ್ರಮುಖರನ್ನು ಪತ್ತೆಹಚ್ಚಲು ಪೊಲೀಸರ ಹಲವು ತಂಡಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿವೆ.