newsics.com/ನ್ಯೂಸಿಕ್ಸ್
ಶಿಮ್ಲಾ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿಯಂತೆ, ಬೆಂಗಳೂರಿನಿಂದ ಬಂದಿದ್ದ ಒಂದು ಪ್ರವಾಸಿ ಕುಟುಂಬ ಡಲ್ಹೌಸಿ ಪ್ರವಾಸಕ್ಕಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ಪಡೆದಿತ್ತು.
ಈ ಕುಟುಂಬವು ಡಲ್ಹೌಸಿಯಲ್ಲಿ ತಂಗಿದ್ದ ಮತ್ತೊಂದು ಪ್ರವಾಸಿ ಕುಟುಂಬದೊಂದಿಗೆ ವಾಹನವನ್ನು ಹಂಚಿಕೊಂಡು ಸಚ್ ಪಾಸ್ನ ಹಿಮಾಚ್ಛಾದಿತ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳಿತ್ತು. ಚಾಲಕ ಸೇರಿದಂತೆ ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರಲ್ಲಿ ಇಬ್ಬರು ಮಕ್ಕಳು ಕೂಡ ಸೇರಿದ್ದರು.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಭವಿಸಿದ ಸ್ಥಳ ದುರ್ಗಮ ಪ್ರದೇಶವಾಗಿದ್ದು, ಕಡಿದಾದ ಇಳಿಜಾರುಗಳಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ. ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ.
DK Shivakumar ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮ