newsics.com/ನ್ಯೂಸಿಕ್ಸ್
ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಈಗ ಬಹುತೇಕ ಖಚಿತವಾಗಿದೆ.
ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ.
ಏಕೈಕ ಡಿಸಿಎಂ ಹುದ್ದೆ: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಲು ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಪರಮೇಶ್ವರ್ ಅವರು ಮಾತ್ರ ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದರಿಂದ, ತೆರವಾಗಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಮುಂಚೂಣಿಗೆ ಬಂದಿದೆ. ಹೈಕಮಾಂಡ್ ಶೀಘ್ರದಲ್ಲೇ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.