newsics.com/ನ್ಯೂಸಿಕ್ಸ್
ಬೆಂಗಳೂರು: ಡಿ.ಕೆ.ಶಿವಕುಮಾರ್ ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಲೋಕಭವನ ಹಾಗೂ ವಿಧಾನಸೌಧ ಸುತ್ತಮುತ್ತ ಹೈ-ಅಲರ್ಟ್ ಘೋಷಿಸಲಾಗಿದೆ.
ಬೆಣ್ಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ನೇತೃತ್ವದಲ್ಲಿ 3 ಜಂಟಿ ಆಯುಕ್ತರು, 20 ಡಿಸಿಪಿಗಳು, ಕೆಎಸ್ಆರ್ಪಿ ತುಕಡಿ ಸೇರಿದಂತೆ 2,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಪ್ರತಿ ಸೆಕ್ಟರ್ಗೂ ಓರ್ವ ಡಿಸಿಪಿ ಉಸ್ತುವಾರಿ ವಹಿಸಿದ್ದಾರೆ.
ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ ಜಾಗವನ್ನು ವಿವಿಧ ಸೆಕ್ಟರ್ಗಳಾಗಿ ವಿಂಗಡಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ